ವಿಶ್ವಾಸಮತ ಯಾಚನೆಗೆ ಡೆಡ್ ಲೈನ್ ಇಂದು ನೀಡಲಾಗಿದೆ. ಇದೇ ವೇಳೆ ಕೈ ಆಪರೇಷನ್ ಹಿನ್ನೆಲೆ ಕೈ ಶಾಸಕರೋರ್ವರು ಗೈರಾಗಲಿದ್ದಾರೆ. ಇದರಿಂದ ಮೈತ್ರಿ ಪಾಳಯದ ನಂಬರ್ ಗಳಲ್ಲಿ ಮತ್ತಷ್ಟು ಕುಸಿತವಾಗಿದೆ.

ಬೆಂಗಳೂರು [ಜು.22] : ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ ಇಂದೂ ಕೂಡ ಸದನಕ್ಕೆ ಗೈರಾಗಲಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ನಾಗೇಂದ್ರಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಆಪರೇಷನ್ ನಡೆಯಲಿದ್ದು, ಈ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. 

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಇಂದು ಮೈತ್ರಿ ಪಾಳಯದ ವಿಶ್ವಾಸಮತ ಯಾಚನೆ ನಡೆಯುವ ಸಾಧ್ಯತೆ ಇದ್ದು, ಈ ವೇಳೆ ಶಾಸಕ ನಾಗೇಂದ್ರ ಗೈರಾಗಲಿದ್ದಾರೆ. 

ಇನ್ನು ವಿಶೇಷ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವಾರ್ಡ್ ಬಳಿ ಪೊಲೀಸರ ನಿಯೋಜನೆ ಮಾಡಿದ್ದು, ಯಾರ ಭೇಟಿಗೂ ಅವಕಾಶ ನೀಡುತ್ತಿಲ್ಲ.