ಭೀಕರ ಅಪಘಾತ : ಕಾಂಗ್ರೆಸ್ ಶಾಸಕ ಸಾವು
ಭೀಕರ ರಸ್ತೆ ಅಪಘಾತದದಲ್ಲಿ ಜಮಖಂಡಿ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ಸಾವನ್ನಪ್ಪಿದ್ದಾರೆ.
ಬಾಗಲಕೋಟೆ : ಭೀಕರ ರಸ್ತೆ ಅಪಘಾತದದಲ್ಲಿ ಜಮಖಂಡಿ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ಸಾವನ್ನಪ್ಪಿದ್ದಾರೆ. ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅವರು ನಿಧನರಾಗಿದ್ದಾರೆ.
ತುಳಸಿಗೇರಿ ಬಳಿಯಲ್ಲಿ ಕಾರು ಪಲ್ಟಿಯಾಗಿ ಟೈರ್ ಬ್ಲಾಸ್ಟ್ ಆಗಿದ್ದು ಈ ವೇಳೆ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.
ಹೆಗಡೆ ವಿರುದ್ಧ ಗೆದ್ದ ಹೆಗ್ಗಳಿಕೆ : 2013 ಹಾಗೂ 2018ರಲ್ಲಿ ಜಮಖಂಡಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಅವರು ರಾಮಕೃಷ್ಣ ಹೆಗಡೆ ಅವರನ್ನು ಸೋಲಿಸಿದ್ದರು. 1991ರ ಲೋಕಸಭಾ ಚುನಾವಣೆಯಲ್ಲಿ ಗೆದ್ದಿದ್ದ ನ್ಯಾಮಗೌಡ ಅವರು ಕೇಂದ್ರ ಕಲ್ಲಿದ್ದಲು ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಕೃಷ್ಣ ತೀರ ರೈತ ಸಂಘದ ಮೂಲಕ ರೈತ ಪರ ಕಾರ್ಯಕ್ಕೆ ಖ್ಯಾತಿಯಾಗಿದ್ದ ಅವರು ರೈತರ ಶ್ರಮ ಹಾಗು ಆರ್ಥಿಕ ನೆರವಿನಿಂದ ಎರಡು ಬ್ಯಾರೇಜ್ ನಿರ್ಮಾಣ ಮಾಡಿ, ಜಮಖಂಡಿ ಹಾಗೂ ಅಥಣಿ ತಾಲೂಕಿಗೆ ಅನೂಕಲ ಒದಗಿಸಿದ್ದರು.
ಅಂದು ಮುಖ್ಯಮಂತ್ರಿಯಾಗಿದ್ದ ನಾಯಕ ಬಂಗಾರಪ್ಪ ಅವರು ರೈತ ನಾಯಕ ಎಂದು ಗುರುತಿಸಿ ನ್ಯಾಮಗೌಡ ಅವರಿಗೆ ಟಿಕೆಟ್ ಕೊಡಿಸಿದ್ದರು. ಈ ವೇಳೆಯೇ ರಾಮಕೃಷ್ಣ ಹೆಗಡೆ ಅವರನ್ನು ಸೋಲಿಸಿ ನ್ಯಾಮಗೌಡ ಅವರು ವಿಜಯಿಯಾಗಿದ್ದರು. ಈ ಬಾರಿ ಜಮಖಂಡಿಯಿಂದ ಸ್ಪರ್ಧಿಸಿ ವಿಜಯಿಯಾಗಿದ್ದ ಅವರು ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗುವ ಸಾಧ್ಯತೆ ಇತ್ತು - ಆದರೆ ಕಾರು ಅಪಘಾತದಲ್ಲಿ ಅಕಾಲಿಕವಾಗಿ ಸಿದ್ದು ನ್ಯಾಮಗೌಡ ನಿಧನರಾಗಿದ್ದಾರೆ.
ಗಣ್ಯರ ಕಂಬನಿ :
Shocked to hear about the untimely death of our Senior Leader & recently elected MLA from Jamkhandi, Sri Siddu Nyamagouda. A fighter & a doer.. his commitment for farmers issues was exceptional.
— Dinesh Gundu Rao (@dineshgrao) May 28, 2018
My heartfelt condolences.
Extremely saddened by the passing of Jamkhandi MLA, Shri Siddu B Nyamagouda in a road accident. He was a deeply committed and hard working leader of @INCKarnataka. We will miss him.
— Dr. G Parameshwara (@DrParameshwara) May 28, 2018
My condolences to his friends and family. https://t.co/h3T35KEGAz
ನಮ್ಮ ಪಕ್ಷದ ಶಾಸಕ ಸಿದ್ದುನ್ಯಾಮಗೌಡ ಅವರ ಅಕಾಲಿಕ ಸಾವು ನನ್ನನ್ನು ಆಘಾತಕ್ಕೀಡು ಮಾಡಿದೆ. 'ಬ್ಯಾರೇಜ್ ಸಿದ್ದು' ಎಂದೇ ಜನಪ್ರಿಯರಾಗಿದ್ದ ಸಿದ್ದು ನ್ಯಾಮಗೌಡ ಅವರು ಶಾಸಕ ಸಂಸದ, ಮತ್ತು ಕೇಂದ್ರ ಸಚಿವರಾಗಿ ಜನ ಸದಾ ನೆನಪು ಮಾಡಿಕೊಳ್ಳುವಂತಹ ಕೆಲಸ ಮಾಡಿದ್ದಾರೆ. ಸ್ನೇಹಿತ ಸಿದ್ದು ನ್ಯಾಮಗೌಡರಿಗೆ ನನ್ನ ದುಃಖ ತಪ್ತ ಶ್ರದ್ಧಾಂಜಲಿ. pic.twitter.com/U8IZBKL3ql
— Siddaramaiah (@siddaramaiah) May 28, 2018