Asianet Suvarna News Asianet Suvarna News

ಸಿದ್ದು ನ್ಯಾಮಗೌಡ ಪುತ್ರನಿಗೆ ಕೈ ಟಿಕೆಟ್

ಜಮಖಂಡಿಯ ಹಾಲಿ ಶಾಸಕ ಸಿದ್ದು ನ್ಯಾಮಗೌಡ ಅವರ ಮರಣದಿಂದಾಗಿ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಸಿದ್ದು ನ್ಯಾಮಗೌಡರ ಪುತ್ರ ಆನಂದ್ ಸಿದ್ದು ನ್ಯಾಮಗೌಡ ಅವರನ್ನು ಕಣಕ್ಕಿಳಿಸಲು ರಾಜ್ಯ ಕಾಂಗ್ರೆಸ್ ನಿರ್ಧಾರ ಮಾಡಿದೆ. 

Congress party has decided to field late Siddu Nyamagouda son
Author
Bengaluru, First Published Jul 22, 2018, 9:45 AM IST

ಬೆಂಗಳೂರು: ಜಮಖಂಡಿಯ ಹಾಲಿ ಶಾಸಕ ಸಿದ್ದು ನ್ಯಾಮಗೌಡ ಅವರ ಮರಣದಿಂದಾಗಿ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಸಿದ್ದು ನ್ಯಾಮಗೌಡರ ಪುತ್ರ ಆನಂದ್ ಸಿದ್ದು ನ್ಯಾಮಗೌಡ ಅವರನ್ನು ಕಣಕ್ಕಿಳಿಸಲು ರಾಜ್ಯ ಕಾಂಗ್ರೆಸ್ ನಿರ್ಧಾರ ಮಾಡಿದೆ. 

ಸಿದ್ದು ನ್ಯಾಮಗೌಡ ಅವರು 2018 ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ಕಾರು ಅಪಘಾತದಲ್ಲಿ ಮೃತಪಟ್ಟಿದ್ದರು. ಹೀಗಾಗಿ ತೆರವಾಗಿದ್ದ ಶಾಸಕ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ. 

ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಶನಿವಾರ ಸಂಜೆ ನಡೆದ ಸಭೆಯಲ್ಲಿ ಅವರ ಪುತ್ರನಿಗೆ ಟಿಕೆಟ್ ನೀಡಲು ನಿರ್ಧರಿಸಲಾಗಿದೆ.

Follow Us:
Download App:
  • android
  • ios