ಕಾಂಗ್ರೆಸ್'ನಿಂದ ವಿಧಾನಸಭೆ ಚುನಾವಣೆಗೆ ಸ್ವಾಮೀಜಿಯೊಬ್ಬರಿಗೆ ಟಿಕೆಟ್ ? ಬಿಜೆಪಿ ಮಾಜಿ ಸಚಿವರಿಗೆ ಟಾಂಗ್ ?
ಕಾಂಗ್ರೆಸ್-ಬಿಜೆಪಿ ನಡುವೆಯೇ ತುರುಸಿನ ಸ್ಪರ್ಧೆ ನಡೆಯುವ ಸಾಧ್ಯತೆಗಳು ದಟ್ಟವಾಗಿವೆ.
ಹಾಲಿ ಶಾಸಕ ಲಕ್ಷ್ಮಣ ಸವದಿ ಇಲ್ಲಿ ಬಿಜೆಪಿ ಅಭ್ಯರ್ಥಿಯಾಗುವುದು ಖಚಿತ. ಅವರಿಗೆ ದಿಗ್ಬಂಧನ ಹಾಕಲು ಮೋಟಗಿ ಮಠದ ಪ್ರಭು ಚನ್ನಬಸವ ಸ್ವಾಮೀಜಿ ಅವರಿಗೆ ಖಾದಿ ತೊಡಿಸಲು ಕಾಂಗ್ರೆಸ್ ತಯಾರಿ ನಡೆಸಿದೆ. ಸ್ವಾಮೀಜಿ ಕೂಡ ಚುನಾವಣೆಗೆ ಸಿದ್ಧತೆ ನಡೆಸಿದ್ದಾರೆ. ರಾಜಕೀಯ- ಧರ್ಮ ಯುದ್ಧ ಇಲ್ಲಿ ನಡೆಯಲಿದೆ. ಬಿಜೆಪಿಯನ್ನು ಸದೆಬಡಿಯಲು ಕಾಂಗ್ರೆಸ್ ಪಕ್ಷ ರಣತಂತ್ರ ರೂಪಿಸಿದೆ.
ಕಾಂಗ್ರೆಸ್-ಬಿಜೆಪಿ ನಡುವೆಯೇ ತುರುಸಿನ ಸ್ಪರ್ಧೆ ನಡೆಯುವ ಸಾಧ್ಯತೆಗಳು ದಟ್ಟವಾಗಿವೆ. ಹಾಗಂತ ಹಾಲಿ ಶಾಸಕ ಲಕ್ಷ್ಮಣ ಸವದಿ ಅವರನ್ನು ಎದುರಿಸುವುದು ಅಷ್ಟು ಸುಲಭದ ಮಾತೂ ಅಲ್ಲ. ಕ್ಷೇತ್ರದಲ್ಲಿನ ಅಭಿವೃದ್ಧಿ ಕೆಲಸ ಮತ್ತು ಮತದಾರರೊಂದಿಗಿನ ನಂಟು ಸವದಿ ಗೆಲುವಿನ ಗುಟ್ಟು.