ರೆಬಲ್ಸ್ ಶಾಸಕರು ಇದೀಗ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ವಿರುದ್ಧವೇ ತಿರುಗಿ ಬಿದ್ದಿದ್ದಾರೆ.  ಡಿಕೆ ಶಿವಕುಮಾರ್ ಸ್ಪೀಕರ್ ಕಚೇರಿಯಲ್ಲಿ ಹರಿದು ಹಾಕಿದ್ದು ರಾಜೀನಾಮೆ ಪತ್ರ ಅಲ್ಲ. ಅದು ಮುನಿರತ್ನ ಅವರ ರಾಜೀನಾಮೆ ಸ್ವೀಕೃತಿ ಪತ್ರ ಎಂಬುದು ಗೊತ್ತಾಗಿದೆ.

ಬೆಂಗಳೂರು(ಜು. 06) ಕರ್ನಾಟಕದಲ್ಲಿ ರಾಜಕೀಯ ಹೈ ಡ್ರಾಮಾ ನಡೆಯುತ್ತಿದೆ. ಶಾಸಕರು ಸರಣಿ ರಾಜೀನಾಮೆ ಸಲ್ಲಿಕೆ ಮಾಡುತ್ತಿದ್ದಾರೆ.

Add Asianetnews Kannada as a Preferred SourcegooglePreferred

ಶನಿವಾರ ಬೆಳಗ್ಗೆ ರಾಜೀನಾಮೆ ಸಲ್ಲಿಕೆಗೆ ಸ್ಪೀಕರ್ ಕಚೇರಿಗೆ ಅತೃಪ್ತ ಶಾಸಕರು ತೆರಳಿದ್ದಾಗ ಅಲ್ಲಿಗೆ ಆಗಮಿಸಿದ ಡಿಕೆ ಶಿವಕುಮಾರ್ ಆರ್ ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರ ರಾಜೀನಾಮೆ ಪತ್ರ ಹರಿದು ಹಾಕಿದ್ದಾರೆ ಎಂದು ವರದಿಯಾಗಿತ್ತು.

ಆದರೆ ಡಿಕೆಶಿ ಹರಿದು ಹಾಕಿದ್ದು ರಾಜೀನಾಮೆ ಪತ್ರ ಅಲ್ಲ, ಅದು ಸ್ಪೀಕರ್ ಕಚೇರಿಯಲ್ಲಿ ರಾಜೀನಾಮೆಗೆ ಕೊಟ್ಟ ಸ್ವೀಕೃತಿ ಪತ್ರ ಎಂಬುದು ಗೊತ್ತಾಗಿದೆ. ಇದೀಗ ರೆಬಲ್ ಶಾಸಕರು ನಮ್ಮ ಹಕ್ಕುಗಳಿಗೆ ಚ್ಯುತಿ ಬಂದಿದೆ ಎಂದು ಡಿಕೆಶಿ ಅವರ ಮೇಲೆಯೇ ದೂರು ನೀಡಲು ಮುಂದಾಗಿದ್ದಾರೆ.

ಶಾಸಕರ ಸಾಮೂಹಿಕ ರಾಜೀನಾಮೆ ಸಂಪೂರ್ಣ ಕತೆ ಇಲ್ಲಿದೆ

ಶಾಸಕರ ರಾಜೀನಾಮೆಯನ್ನು ಮಂಗಳವಾರ ಪರಿಶೀಲನೆ ಮಾಡುತ್ತೇನೆ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ. ಒಟ್ಟಿನಲ್ಲಿ ದೋಸ್ತಿ ಸರಕಾರಕ್ಕೆ ಶಾಸಕರ ರಾಜೀನಾಮೆ ಕಂಟಕವಾಗಿ ಪರಿಣಮಿಸಿದೆ.

ಡಿಕೆ ಶಿವಕುಮಾರ್ ಹವಾಲಾ ಹಣದ ಪ್ರಕರಣವನ್ನು ಎದುರಿಸುತ್ತಿದ್ದಾರೆ. ಅವರ ಮೇಲೆ ದಾಖಲಾಗಿದ್ದ ಪ್ರಕರಣವೊಂದರ ವಜಾ ಅರ್ಜಿಯನ್ನು ಇತ್ತಿಚೇಗೆ ಜನಪ್ರತಿನಿಧಿಗಳ ನ್ಯಾಯಾಲಯ ತಳ್ಳಿಹಾಕಿತ್ತು.