ಕೊಪ್ಪಳದಲ್ಲಿ ಮಾತನಾಡಿದ ರಾಯರೆಡ್ಡಿ ಈಗಾಗಲೇ ಕಾಂಗ್ರೆಸ್​ ಪಕ್ಷ ಮಾಡಿರುವ ಅಭಿವೃದ್ಧಿಯಿಂದ ನಮಗೆ ಲಾಭವಿದೆ. ಮುಂದಿನ ದಿನಗಳಲ್ಲಿ ಬಿಜೆಪಿಯ ಆಂತರಿಕ ಭಿನ್ನಾಭಿಪ್ರಾಯವೂ ಲಾಭವಾಗಲಿದೆ ಎಂದರು.

ಕೊಪ್ಪಳ (ಜ.26): ರಾಯಣ್ಣ ಬ್ರಿಗೇಡ್​ ಸ್ಥಾಪನೆ ವಿಚಾರದಲ್ಲಿ ಕೆ.ಎಸ್ ಈಶ್ವರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ನಡುವಿನ ಭಿನ್ನಾಭಿಪ್ರಾಯ ಕಾಂಗ್ರೆಸ್’​ಗೆ ಲಾಭವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಅವರು ಈಗಾಗಲೇ ಕಾಂಗ್ರೆಸ್​ ಪಕ್ಷ ಮಾಡಿರುವ ಅಭಿವೃದ್ಧಿಯಿಂದ ನಮಗೆ ಲಾಭವಿದೆ. ಮುಂದಿನ ದಿನಗಳಲ್ಲಿ ಬಿಜೆಪಿಯ ಆಂತರಿಕ ಭಿನ್ನಾಭಿಪ್ರಾಯವೂ ಲಾಭವಾಗಲಿದೆ ಎಂದರು.

ನ್ಯಾಯಮೂರ್ತಿ ವಿಶ್ವನಾಥ್​​ ಶೆಟ್ಟಿಯವರನ್ನು ಲೋಕಾಯುಕ್ತ ಹುದ್ದಗೆ ನೇಮಕ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಬಸವರಾಜ ರಾಯರೆಡ್ಡಿ, ಆರೋಪಗಳು ಇದ್ದಾಕ್ಷಣ ಭ್ರಷ್ಟರು ಎನ್ನುಲು ಸಾಧ್ಯವಿಲ್ಲ. ಅವರ ಮೇಲಿನ ಆರೋಪಗಳು ಸಾಬಿತಾಗಬೇಕು, ಆದರೆ ಅವರ ಮೇಲಿನ ಯಾವುದೇ ಆರೋಪಗಳು ಸಾಬಿತಾಗಿಲ್ಲ, ಹೀಗಾಗಿ ನ್ಯಾಯಮೂರ್ತಿ ವಿಶ್ವನಾಥ್​ ಶೆಟ್ಟಿಯವರನ್ನು ಭ್ರಷ್ಟರು ಎನ್ನಲು ಸಾಧ್ಯವಿಲ್ಲ ಎಂದರು.