ನಾನು - ಸಿಎಂ ಸಿದ್ದರಾಮಯ್ಯ ಒಂದೇ ಗಾಡಿಯ ನೊಗ ಹೊತ್ತ ಜೋಡಿ ಎತ್ತು ಇದ್ದಂತೆ. ನಾವು ನೊಗ ಹೊತ್ತು ರಾಜ್ಯಾದ್ಯಂತ ಓಡಾಡಿದ್ದೇವೆ. ನಾವಿಬ್ಬರೂ ಅಣ್ಣ ತಮ್ಮಂದಿರಂತೆ, ಜನರ ನಿರೀಕ್ಷೆಗೆ ಅನುಗುಣವಾಗಿ ಕೆಲಸ ಮಾಡುತ್ತಿದ್ದೇವೆ' ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಬಣ್ಣಿಸಿದ್ದಾರೆ.

ಮಧುಗಿರಿ (ಡಿ.18): `ನಾನು- ಸಿಎಂ ಸಿದ್ದರಾಮಯ್ಯ ಒಂದೇ ಗಾಡಿಯ ನೊಗ ಹೊತ್ತ ಜೋಡಿ ಎತ್ತು ಇದ್ದಂತೆ. ನಾವು ನೊಗ ಹೊತ್ತು ರಾಜ್ಯಾದ್ಯಂತ ಓಡಾಡಿದ್ದೇವೆ. ನಾವಿಬ್ಬರೂ ಅಣ್ಣ ತಮ್ಮಂದಿರಂತೆ, ಜನರ ನಿರೀಕ್ಷೆಗೆ ಅನುಗುಣವಾಗಿ ಕೆಲಸ ಮಾಡುತ್ತಿದ್ದೇವೆ' ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಬಣ್ಣಿಸಿದ್ದಾರೆ.

Add Asianetnews Kannada as a Preferred SourcegooglePreferred

ಈ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾಡಿದ್ದ ಟೀಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಭಾನುವಾರ ಮಧುಗಿರಿ ತಾಲೂಕು ಪುರವರ ಹೋಬಳಿ ಬ್ಯಾಲ್ಯದಲ್ಲಿ ನಡೆದ ಕನಕ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. `ಪರಮೇಶ್ವರ್’ಗೂ ಸಿದ್ದರಾಮಯ್ಯಗೂ ಆಗುವುದಿಲ್ಲ ಎಂದು ಯಡಿಯೂರಪ್ಪ ಹೇಳುತ್ತಾರೆ.

ಇದು ಶುದ್ಧ ಸುಳ್ಳು. ಸಿಎಂ ಸಿದ್ದರಾಮಯ್ಯ ಮತ್ತು ನಾನು ಒಗ್ಗೂಡಿ ಈ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ' ಎಂದ ಅವರು, ಯಡಿಯೂರಪ್ಪ- ಈಶ್ವರಪ್ಪ ಬಿಜೆಪಿಯಲ್ಲಿ ಎಂದಿಗೂ ಒಂದಾಗುವುದಿಲ್ಲ.

ಕಾಂಗ್ರೆಸ್ ಪಕ್ಷವನ್ನು ಬಲಿಷ್ಠವಾಗಿ ಕಟ್ಟುವ ಸಲುವಾಗಿ ಯಾತ್ರೆ ಕೈಗೊಂಡಿದ್ದೇವೆ. ಇಲ್ಲ ಸಲ್ಲದ ಸುಳ್ಳು ವದಂತಿಗಳಿಗೆ ಜನರು ಕಿವಿಗೊಡಬಾರದು. ವಿರೋಧ ಪಕ್ಷಗಳು ಸುಳ್ಳು ಹೇಳಿ ಜನರನ್ನು ದಿಕ್ಕು ತಪ್ಪಿಸಲು ಹೊರಟಿದ್ದಾರೆ. ನಾವೆಲ್ಲ ಒಟ್ಟಾಗಿದ್ದೇವೆ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.