Asianet Suvarna News Asianet Suvarna News

ಚುನಾವಣೆ ವಿಚಾರವಾಗಿ ಕಾಂಗ್ರೆಸ್’ಗೆ ಕಾಡುತ್ತಿದೆ ಚಿಂತೆ..!

ಕಾಂಗ್ರೆಸ್ಸಿನ ರಹೀಂಖಾನ್ ಹಾಲಿ ಶಾಸಕ. ಅವರು ಮತ್ತೊಮ್ಮೆ ಸ್ಪರ್ಧಿಸುವುದು ಬಹುತೇಕ ಖಚಿತ. ಮಾಜಿ ಸಚಿವ ದಿವಂಗತ ಗುರುಪಾದಪ್ಪ ನಾಗಮಾರಪಳ್ಳಿ ಪುತ್ರ ಸೂರ್ಯಕಾಂತ ನಾಗಮಾರಪಳ್ಳಿ ಬಿಜೆಪಿ ಅಭ್ಯರ್ಥಿ ಎಂಬ ಸೂಚನೆಯನ್ನು ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಈ ಹಿಂದೆಯೇ ನೀಡಿದ್ದಾರೆ.

Congress Worry About BSP

ಬೀದರ್ : ಕಾಂಗ್ರೆಸ್ಸಿನ ರಹೀಂಖಾನ್ ಹಾಲಿ ಶಾಸಕ. ಅವರು ಮತ್ತೊಮ್ಮೆ ಸ್ಪರ್ಧಿಸುವುದು ಬಹುತೇಕ ಖಚಿತ. ಮಾಜಿ ಸಚಿವ ದಿವಂಗತ ಗುರುಪಾದಪ್ಪ ನಾಗಮಾರಪಳ್ಳಿ ಪುತ್ರ ಸೂರ್ಯಕಾಂತ ನಾಗಮಾರಪಳ್ಳಿ ಬಿಜೆಪಿ ಅಭ್ಯರ್ಥಿ ಎಂಬ ಸೂಚನೆಯನ್ನು ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಈ ಹಿಂದೆಯೇ ನೀಡಿದ್ದಾರೆ.

ಹೀಗಾಗಿ ಸೂರ್ಯಕಾಂತ ಬಿರುಸಿನ ಓಡಾಟದಲ್ಲಿ ತೊಡಗಿದ್ದಾರೆ. ಟಿಕೆಟ್ ಅಧಿಕೃತವಾಗಿ ಘೋಷಣೆಯಾಗಿಲ್ಲದ ಕಾರಣ, ಗುರುನಾಥ ಕೊಳ್ಳೂರ ಅಭ್ಯರ್ಥಿಯಾಗಲು ಪ್ರಯತ್ನಿಸುತ್ತಿದ್ದಾರೆ. ಆರ್‌ಎಸ್‌ಎಸ್ ಜತೆ ಒಡನಾಟ ಹೊಂದಿರುವ ಈಶ್ವರಸಿಂಗ್ ಠಾಕೂರ್ ತಮಗೇ ಟಿಕೆಟ್ ಸಿಗಲಿದೆ ಎನ್ನುತ್ತಿದ್ದಾರೆ.

ಜೆಡಿಎಸ್ ಜತೆಗಿನ ಮೈತ್ರಿ ಹಿನ್ನೆಲೆಯಲ್ಲಿ ಈ ಕ್ಷೇತ್ರದಿಂದ ಬಿಎಸ್ಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಜುಲ್ಫಿಕರ್ ಹಾಶ್ಮಿ ಕಣಕ್ಕಿಳಿಯಲಿದ್ದಾರೆ. ಕ್ಷೇತ್ರದಲ್ಲಿ ಮುಸ್ಲಿಮರ ಪ್ರಾಬಲ್ಯವಿದೆ. ಲಿಂಗಾಯತ, ಪರಿಶಿಷ್ಟ ಜಾತಿ, ಪಂಗಡ, ಒಬಿಸಿ ಮತಗಳೂ ಹೆಚ್ಚಿನ ಪ್ರಮಾಣದಲ್ಲಿವೆ. ಬಿಎಸ್ಪಿ ಸ್ಪರ್ಧೆಯಿಂದಾಗಿ, ಅದರಲ್ಲೂ ಆ ಪಕ್ಷದಿಂದ ಮುಸ್ಲಿಂ ಅಭ್ಯರ್ಥಿ ಸ್ಪರ್ಧಿಸುತ್ತಿರುವುದರಿಂದಾಗಿ ಕಾಂಗ್ರೆಸ್ಸಿಗೆ ಮತ ವಿಭಜನೆ ಆತಂಕವಿದೆ.

Follow Us:
Download App:
  • android
  • ios