ಪುರಿ ಜಗನ್ನಾಥ ಮಂದಿರದಲ್ಲಿ ನಡೆಯುವ ಅನೇಕ ಪವಾಡಗಳಿಗೆ ವಿಜ್ಞಾನವೂ ಉತ್ತರಿಸುವುದು ಅಸಾಧ್ಯ. ಇಂಥ ದೇವಾಲಯ ಕೆಲವೇ ಕೆಲವು ದಿನಗಳ ಕಾಲ ತೆರೆಯಲಿದೆ. ಈ ದೇವಸ್ಥಾನವನ್ನು ಪ್ರವೇಶಿಸಲು ಎಲ್ಲ ಧರ್ಮೀಯರಿಗೂ ಅವಕಾಶ ನೀಡಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

ನವದೆಹಲಿ: ಯಾವುದೇ ಧರ್ಮ ನೋಡದೆ, ಎಲ್ಲರಿಗೂ ದೇವಸ್ಥಾನದಲ್ಲಿ ಪ್ರಾರ್ಥನೆಗೆ ಅವಕಾಶ ನೀಡಬೇಕು ಎಂದು ಸುಪ್ರೀಂಕೋರ್ಟ್‌ ಪುರಿ ಜಗನ್ನಾಥ ದೇವಸ್ಥಾನದ ಆಡಳಿತ ಮಂಡಳಿಗೆ ಆದೇಶಿಸಿದೆ.

Add Asianetnews Kannada as a Preferred SourcegooglePreferred

‘ಹಿಂದುತ್ವ ಯಾವುದೇ ನಂಬಿಕೆಯನ್ನು ನಾಶಪಡಿಸಲು ಬಯಸುವುದಿಲ್ಲ. ಅದು ಶತಮಾನಗಳ ಪ್ರೇರಣೆಯಿಂದ ಪ್ರತಿಫಲಿತವಾದುದು’ ಎಂದು ಹೇಳಿರುವ ನ್ಯಾ.ಆದರ್ಶ ಗೋಯಲ್‌ ನೇತೃತ್ವದ ನ್ಯಾಯಪೀಠ, ಹಿಂದಿನ ಆದೇಶವನ್ನು ಉಲ್ಲೇಖಿಸಿ ಈ ತೀರ್ಪು ನೀಡಿದೆ. 

ಪುರಿ ಜಗನ್ನಾಥ ಮಂದಿರದ ಪವಾಡಗಳಿವು..

ದೇವಸ್ಥಾನದಲ್ಲಿ ಭಕ್ತರ ಮೇಲಿನ ದೌರ್ಜನ್ಯ ಮತ್ತು ಅನುವಂಶಿಕ ಅರ್ಚಕರ ರದ್ದತಿ ಹಾಗೂ ಅರ್ಚಕರ ನೇಮಕಾತಿ ಕುರಿತ ಸಮಸ್ಯೆಗಳ ಇತ್ಯರ್ಥಕ್ಕೆ ಎರಡು ವಾರಗಳೊಳಗೆ ಸಮಿತಿ ರಚಿಸುವಂತೆ ಕೇಂದ್ರಕ್ಕೆ ಕೋರ್ಟ್‌ ನಿರ್ದೇಶಿಸಿದೆ.