ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಸಾವಿನ ನಂತರ ವಿವಾದವೊಂದು ಭುಗಿಲೆದ್ದಿದೆ. ಕರುಣಾನಿಧಿ ಅಂತ್ಯ ಸಂಸ್ಕಾರ ವಿಚಾರ ಹೊಸ ವಿವಾದಕ್ಕೆ ನಾಂದಿ ಹಾಡಿದೆ.
ಚೆನ್ನೈ[ಆ.7] ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಅಂತ್ಯ ಸಂಸ್ಕಾರಕ್ಕೆ ಜಾಗ ನಿಗದಿ ಮಾಡುವ ವಿಚಾರ ವಿವಾದಕ್ಕೆ ಕಾರಣವಾಗಿದೆ. ಕರುಣಾನಿಧಿ ಅಭಿಮಾನಿಗಳು ಮರೀನಾ ಬೀಚ್ ನಲ್ಲಿ ಅಂತ್ಯ ಸಂಸ್ಕಾರ ನಡೆಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಆದರೆ ಮರೀನಾ ಬೀಚ್ ನಲ್ಲಿ ಅವಕಾಶ ನೀಡುವ ಬಗ್ಗೆ ತಮಿಳುನಾಡು ಸರಕಾರ ಇಲ್ಲಿಯವರೆಗೆ ಯಾವುದೆ ಸ್ಪಷ್ಟನೆ ನೀಡಿಲ್ಲ. ತಮಿಳುನಾಡು ಸರಕಾರ ಕರುಣಾನಿಧಿ ಸಾವಿನಲ್ಲೂ ರಾಜಕಾರಣ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
