ನನ್ನನ್ನು ಎನ್’ಕೌಂಟರ್’ನಲ್ಲಿ ಮುಗಿಸಲು ಪೊಲೀಸರಿಂದ ಪ್ಲಾನ್: ಜಿಗ್ನೇಶ್ ಮೆವಾನಿ
- ಪೊಲೀಸ್ ಅಧಿಕಾರಿಗಳ ವಾಟ್ಸಪ್ ಸಂಭಾಷಣೆ ವೈರಲ್
- ಕೊಲ್ಲಲು ಆದೇಶ ಬಂದಿರುವುದು ಗಾಂಧಿನಗರದಿಂದಲೋ? ದೆಹಲಿಯಿಂದಲೋ?: ಜಿಗ್ನೇಶ್
ಅಹಮದಾಬಾದ್: ಪೊಲೀಸ್ ಅಧಿಕಾರಿಗಳ ವಾಟ್ಸಪ್ ಸಂಭಾಷಣೆ ವೈರಲ್ ಆಗಿರುವ ಬೆನ್ನಲ್ಲೇ ಗುಜರಾತ್ ಶಾಸಕ ಹಾಗೂ ದಲಿತ ಯುವನಾಯಕ ಜಿಗ್ನೆಶ್ ಮೆವಾನಿ ತಮ್ಮ ಜೀವಕ್ಕೆ ಅಪಾಯವಿದೆಯೆಂದು ಆತಂಕ ವ್ಯಕ್ತಪಡಿಸಿದ್ದಾರೆ.
ಪೊಲೀಸ್ ಅಧಿಕಾರಿಗಳು ಸದಸ್ಯರಾಗಿರುವ ‘ADR Police & MEDIA’ ಎಂಬ ವಾಟ್ಸಪ್ ಗ್ರೂಪ್’ನಲ್ಲಿ ಡಿವೈಎಸ್’ಪಿ ಯೊಬ್ಬರು, ರಾಜಕಾರಣಿಯನ್ನು ಪೊಲೀಸರು ಥಳಿಸುವ ಹಾಗೂ ಪೊಲೀಸ್ ಎನ್’ಕೌಂಟರ್’ ಬಗ್ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮಾತನಾಡುವ ವಿಡಿಯೋ ಕ್ಲಿಪ್ ಹಾಕಿದ್ದಾರೆ. ಬಳಿಕ, ಪೊಲೀಸರ ‘ಅಪ್ಪ’ನಾಗಲು ಹೊರಟಿರುವವರಿಗೆ ಇದೇ ಗತಿ, ಇದನ್ನು ನೆನಪಿನಲ್ಲಿಟ್ಟುಕೊಳ್ಳಿ- ಗುಜರಾತ್ ಪೊಲೀಸ್, ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
Jignesh mevani's encounter?
— Jignesh Mevani (@jigneshmevani80) February 23, 2018
Here is the link of gujarati web portal which exposes a WhatsApp communication where two top cops are discussing how I could be killed in an encounter. Can you believe this ?https://t.co/qdS8e4iHCe
ಅದಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಮೈಲಿ ಇಮೋಜಿ ಹಾಕುವ ಮೂಲಕ ಪ್ರತಿಕ್ರಯಿಸಿದ್ದಾರೆ. ಆ ಸಂಭಾಷಣೆಯು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಅದಕ್ಕೆ ಜಿಗ್ನೇಶ್ ಮೆವಾನಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.
ನನ್ನನ್ನು ಮುಗಿಸುವ ಬಗ್ಗೆ ಪೊಲೀಸರು ಚರ್ಚೆ ನಡೆಸುತ್ತಿದ್ದಾರೆ, ನನನ್ನು ಎನ್’ಕೌಂಟರ್’ನಲ್ಲಿ ಕೊಲ್ಲಲು ಆದೇಶ ಬಂದಿರುವುದು ಗಾಂಧಿನಗರದಿಂದಲೋ? ದೆಹಲಿಯಿಂದಲೋ ಎಂದು ಕೇಳಿದ್ದಾರೆ. ಇದು ಗಂಬೀರ ವಿಚಾರ, ಈ ಬಗ್ಗೆ ಗೃಹ ಕಾರ್ಯದರ್ಶಿ ಮತ್ತು ಡಿಜಿಪಿಗೆ ದೂರು ನೀಡುವುದಾಗಿ ಜಿಗ್ನೇಶ್ ಮೆವಾನಿ ಹೇಳಿದ್ದಾರೆ.
This is getting really serious. Cops discussing my encounter. So, upon whose instructions will I be killed? Has the order come from Gandhi Nagar or Delhi ? pic.twitter.com/LNgBjYeSjB
— Jignesh Mevani (@jigneshmevani80) February 24, 2018