ಈಗ ಇಲ್ಲಿನ​ ಕಾರ್ಪೋರೇಷನ್ ಬ್ಯಾಂಕ್  ಮುಖ್ಯ ಕಚೇರಿಯನ್ನು ಬೆಂಗಳೂರಿಗೆ ಸ್ಥಳಾಂತರಿಸಲು ನಿರ್ಧರಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ.  

ಬೆಂಗಳೂರು (ನ.26): ದೇಶದಲ್ಲೇ ಮಂಗಳೂರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿಶಿಷ್ಟ ಸ್ಥಾನವಿದೆ. ಐದು ರಾಷ್ಟ್ರೀಯ ಬ್ಯಾಂಕ್​ಗಳಿಗೆ ಜನ್ಮ ನೀಡಿರುವ ಹೆಗ್ಗಳಿಕೆಗೆ ಮಂಗಳೂರು ಪಾತ್ರವಾಗಿದೆ.

ಈಗ ಇಲ್ಲಿನ​ ಕಾರ್ಪೋರೇಷನ್ ಬ್ಯಾಂಕ್ ಮುಖ್ಯ ಕಚೇರಿಯನ್ನು ಬೆಂಗಳೂರಿಗೆ ಸ್ಥಳಾಂತರಿಸಲು ನಿರ್ಧರಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಗಳೂರಿನ ಹೊರವಲಯದಲ್ಲಿ ಇರುವ ಹಾರ್ಡ್​ವೇರ್ ಪಾರ್ಕ್​ ಕೈಗಾರಿಕಾ ಪ್ರದೇಶದಲ್ಲಿ 200 ಎಕರೆ ಭೂಮಿಯಲ್ಲಿ ಮುಖ್ಯ ಕಚೇರಿಯ ಕಟ್ಟಡ ತಲೆ ಎತ್ತುತ್ತಿದ್ದು, ಬ್ಯಾಂಕ್​ನ ಅಧ್ಯಕ್ಷರು, ಆಡಳಿತ ನಿರ್ದೇಶಕರು ಸೇರಿದಂತೆ ಪ್ರಮುಖರು ಬೆಂಗಳೂರಿನಲ್ಲೇ ಕಾರ್ಯಾ ನಿರ್ವಹಿಸಲಿದ್ದಾರೆ.

ಈಗಾಗಲೇ ಐದು ಪ್ರಮುಖ ಬ್ಯಾಂಕ್​ಗಳ ಪೈಕಿ ಕೆನರಾ ಬ್ಯಾಂಕ್, ವಿಜಯಾ ಬ್ಯಾಂಕ್ ಮತ್ತು ಸಿಂಡಿಕೇಟ್ ಬ್ಯಾಂಕ್​ ತನ್ನ ಮುಖ್ಯ ಕಚೇರಿಯನ್ನು ಬೆಂಗಳೂರಿಗೆ ಸ್ಥಳಾಂತರಿಸಿದೆ. ಈಗ ಸ್ಥಳಾಂರಿಸೋ ಸರದಿ ಕಾರ್ಪೊರೇಷನ್ ಬ್ಯಾಂಕ್​ನದ್ದು.

ಕಾರ್ಪೊರೇಷನ್ ಬ್ಯಾಂಕ್​ನ ಈ ನಿರ್ಧಾರಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮಂಗಳೂರು ಸ್ಮಾರ್ಟ್​ ಸಿಟಿ ಎಂಬ ಹೆಗ್ಗಳಿಕೆ ಪಾತ್ರವಾದ ಎರಡನೇ ದರ್ಜೆ ನಗರವಾಗಿದೆ. ಈ ಪ್ರದೇಶದ ಅಭಿವೃದ್ಧಿಗೆ ಇದು ದೊಡ್ಡ ಹಿನ್ನಡೆ ಎಂಬ ಅಭಿಪ್ರಾಯ ಕೇಳಿಬಂದಿದೆ.