. ದರೋಡೆ ಪ್ರಕರಣವನ್ನು ತಡೆಯುವಲ್ಲಿ ವಿಫಲವಾದ ಹಿನ್ನಲೆಯಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ ಚರಣ್ ರೆಡ್ಡಿ ಅಮಾನತು ಆದೇಶ ಹೊರಡಿಸಿದ್ದಾರೆ
ಬೆಂಗಳೂರು(ಡಿ.7): ಪೊಲೀಸರಿಂದಲೇ 35 ಲಕ್ಷ ರೂ. ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಾಸಿಪಾಳ್ಯ ಇನ್ಸ್ಪೆಕ್ಟರ್ ರಾಘವೇಂದ್ರ ಅವರನ್ನು ಅಮಾನತು ಮಾಡಲಾಗಿದೆ. ದರೋಡೆ ಪ್ರಕರಣವನ್ನು ತಡೆಯುವಲ್ಲಿ ವಿಫಲವಾದ ಹಿನ್ನಲೆಯಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ ಚರಣ್ ರೆಡ್ಡಿ ಅಮಾನತು ಆದೇಶ ಹೊರಡಿಸಿದ್ದಾರೆ. ನ.22 ರಂದು ಕಲಾಸಿಪಾಳ್ಯದ ಎಸ್'ಐ ಮಲ್ಲಿಕಾರ್ಜುನ, ಪೇದೆಗಳಾದ ಮಂಜುನಾಥ್, ಗಿರೀಶ್, ಚಂದ್ರ ಮತ್ತು ಅನಂತ್ ರಾಜು ಅವರು 35 ಲಕ್ಷ ರೂ. ಸುಲಿಗೆ ಮಾಡಿದ್ದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
