ಕೇಂದ್ರದ ವಿರುದ್ಧ ಇದೀಗ ಸಿಪಿಎಂನಿಂದಲೂ ಅವಿಶ್ವಾಸ ನಿರ್ಣಯ
ಆಂಧ್ರಪ್ರದೇಶ ವೈಎಸ್ಆರ್ ಕಾಂಗ್ರೆಸ್, ತೆಲಗು ದೇಶಂ ಪಕ್ಷ ಮತ್ತು ಕಾಂಗ್ರೆಸ್ ಬಳಿಕ ಇದೀಗ ಕೇಂದ್ರ ಸರ್ಕಾರದ ವಿರುದ್ಧ ಸಿಪಿಎಂ ಸಹ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದೆ.
ನವದೆಹಲಿ: ಆಂಧ್ರಪ್ರದೇಶ ವೈಎಸ್ಆರ್ ಕಾಂಗ್ರೆಸ್, ತೆಲಗು ದೇಶಂ ಪಕ್ಷ ಮತ್ತು ಕಾಂಗ್ರೆಸ್ ಬಳಿಕ ಇದೀಗ ಕೇಂದ್ರ ಸರ್ಕಾರದ ವಿರುದ್ಧ ಸಿಪಿಎಂ ಸಹ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದೆ.
ಸಿಪಿಎಂ ಪಕ್ಷದ ಲೋಕಸಭಾ ನಾಯಕ ಪಿ.ಕರುಣಾಕರನ್ ಅವರು ಸೋಮವಾರ ಈ ಕುರಿತಾದ ನೋಟಿಸ್ ಅನ್ನು ಲೋಕಸಭೆ ಕಾರ್ಯದರ್ಶಿ ಅವರಿಗೆ ಸಲ್ಲಿಕೆ ಮಾಡಿದ್ದು, ಮಂಗಳವಾರದ ಅಧಿವೇಶನದಲ್ಲಿ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯ ಮಂಡನೆಗೆ ಅವಕಾಶ ನೀಡಬೇಕು ಎಂದು ಸ್ಪೀಕರ್ ಸುಮಿತ್ರಾ ಮಹಾಜನ್ ಅವರಲ್ಲಿ ಕೋರಿಕೊಳ್ಳಲಾಗಿದೆ.
ಲೋಕಸಭೆಯಲ್ಲಿ ಎನ್ಡಿಎ ಸರ್ಕಾರದ ಮೇಲೆ ಒತ್ತಡ ಹೇರುವ ಭಾಗವಾಗಿ ಈ ತಂತ್ರ ಅನುಸರಿಸಲಾಗುತ್ತಿದೆ ಎಂದು ಸಿಪಿಎಂ ಸಂಸದರು ಹೇಳಿದ್ದಾರೆ.