ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬ ಆಂಬುಲೆನ್ಸ್ ಚಾಲಕನ ದುಷ್ಕೃತ್ಯದಿಂದ ಜೀವ ಕಳೆದುಕೊಂಡಿದ್ದಾನೆ.

ತಿರುವನಂತಪುರಂ : ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬ ಆಂಬುಲೆನ್ಸ್ ಚಾಲಕನ ದುಷ್ಕೃತ್ಯದಿಂದ ಜೀವ ಕಳೆದುಕೊಂಡಿದ್ದಾನೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೇರಳದ ಪಲಕ್ಕಾಡ್ ನಲ್ಲಿ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಆತ ಗಾಯಗೊಂಡಿದ್ದ. ಪಲಕ್ಕಾಡ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ತ್ರಿಶೂರ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು.

ಈ ವೇಳೆ ಗಾಯಾಳು ಆಂಬುಲೆನ್ಸ್ ನಲ್ಲಿ ಮೂತ್ರ ಮಾಡಿದ್ದಕ್ಕೆ ರೊಚ್ಚಿಗೆದ್ದ ಚಾಲಕ ಗಾಯಾಳು ಇದ್ದ ಸ್ಟ್ರೆಚರ್ ಅನ್ನು ಜೋರಾಗಿ ಹೊರಕ್ಕೆಳೆದಿದ್ದಾನೆ. ಆ ರಭಸಕ್ಕೆ ಗಾಯಾಳು ಕೆಳಕ್ಕೆ ಬಿದ್ದಿದ್ದ.

ಆಸ್ಪತ್ರೆ ಸಿಬ್ಬಂದಿ ಅವನನ್ನು ಮೇಲಕ್ಕೆತ್ತಿ ವ್ಹೀಲ್ ಚೇರ್ ನಲ್ಲಿ ಕೂರಿಸಿ ಕರೆದೊಯ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ.