ನಿನ್ನೆ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಭಾರೀ ಮಳೆಯಾಗಿದೆ. ಆಶ್ಚರ್ಯವೆಂದರೆ ಸತತ ಸುರಿದ ಮಳೆಗೆ ಮೊಸಳೆ ಮರಿಯೊಂದು ಪತ್ತೆಯಾಗಿದೆ.

ಮೈಸೂರು(ಅ.06): ನಿನ್ನೆ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಭಾರೀ ಮಳೆಯಾಗಿದೆ. ಆಶ್ಚರ್ಯವೆಂದರೆ ಸತತ ಸುರಿದ ಮಳೆಗೆ ಮೊಸಳೆ ಮರಿಯೊಂದು ಪತ್ತೆಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಭಾರೀ ಪ್ರಮಾಣದ ಮಳೆಯಿಂದಾಗಿ ಮೊಸಳೆ ಮರಿಯೊಂದು ನೀರಿನಲ್ಲಿ ತೇಲಿ ಬಂದಿದೆ. ಶ್ರೀರಂಗಪಟ್ಟಣ ತಾಲೂಕಿನ ‌ಕಾರೇಕುರ ಗ್ರಾಮದ ಶಶಿಕುಮಾರ್ ಎಂಬುವರ ಜಮೀನಿನಲ್ಲಿ ಈ ಮೊಸಳೆ ಮರಿ ಪತ್ತೆಯಾಗಿದೆ. ಆದರೆ ಈ ಮೊಸಳೆ ಮರಿ ಮೀನು ಸಾಕಾಣೆಯ ಕೃಷಿ ಹೊಂಡದಲ್ಲಿ ಪತ್ತೆಯಾಗಿದೆ. ಇಲ್ಲಿಗೆ ಮೀನು ತಿನ್ನಲು ಈ ಮೊಸಳೆ ಮರಿ ಬಂದಿರಬಹುದೆಂದು ಶಂಕಿಸಲಾಗಿದ್ದು, ಇನ್ನೂ ಇಲ್ಲಿನ ಸ್ಥಳೀಯರು ಈ ಮೊಸಳೆ ಮರಿಗೆ ಬಲೆ ಹಾಕಿ ರಕ್ಷಣೆ ಮಾಡಿದ್ದಾರೆ.

ಆದರೆ ಈ ಮೊಸಳೆ ಮರಿಯೊಂದಿಗೆ ದೊಡ್ಡ ಮೊಸಳೆಯೂ ಬಂದಿರಬಹುದೆಂಬ ಆತಂಕ ಜನರಲ್ಲಿ ಉಂಟಾಗಿದೆ. ಸದ್ಯಕ್ಕೆ ಈ ಮೊಸಳೆ ಮರಿಯನ್ನು ಮೃಗಾಲಯದ ವಶಕ್ಕೆ ನೀಡಲಾಗುತ್ತೆ ಎಂದು ಜಮೀನನ ಮಾಲೀಕರು ತಿಳಿಸಿದ್ದಾರೆ.