ಸಿದ್ದರಾಮಯ್ಯ ಸರ್ಕಾರ 5 ವರ್ಷ ಜನಪರ ಕಾರ್ಯಕ್ರಮ ನೀಡಿದೆ. ಇದನ್ನು ಜನತೆ ಮರೆತಿಲ್ಲ. ಹೀಗಾಗಿ ಈ ಉಪಚುನಾವಣೆಗಳಲ್ಲಿ ಸಿದ್ದರಾಮಯ್ಯ ಸರ್ಕಾರದ ಯೋಜನೆಗಳಿಂದ ಪುನಃ ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆಂಬ ವಿಶ್ವಾಸವಿದೆ

ಕೂಡ್ಲಗಿ[ಅ.30]: ಸಿದ್ದರಾಮಯ್ಯ ಹಾಗೂ ದೇವೇಗೌಡರು ಮೊದಲು ಹೊಡೆದಾಡಿದ್ರೂ ಈಗೇನು ಒಂದೇ ವೇದಿಕೆಯಲ್ಲಿ ಸೇರಿಕೊಂಡಿದ್ದಾರೆ ಎಂದು ನೀವು ತಪ್ಪು ಭಾವಿಸಬೇಡಿ. ನನಗೆ ಪ್ರತಿಷ್ಠೆ ಇಲ್ಲ ಈ ದೇಶದ ಭವಿಷ್ಯದ ದೃಷ್ಟಿಯಿಂದ ಜೊತೆಯಾಗಿದ್ದೇವೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದರು.
ಅವರು ಕೂಡ್ಲಿಗಿ ಪಟ್ಟಣದಲ್ಲಿ ಸೋಮವಾರ ಸಂಜೆ ನಡೆದ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯದಲ್ಲಿ ನಡೆಯುವ 5 ಉಪಚುನಾವಣೆಯಲ್ಲಿ ಗೆದ್ದರೆ ಹಿಂದೂಸ್ತಾನದ ರಾಜಕಾರಣದಲ್ಲಿ ಕೇಂದ್ರದಲ್ಲಿಯೂ ಮೈತ್ರಿ ಸರ್ಕಾರ ನಡೆಯುವುದು ಶತಸಿದ್ಧ ಎಂದರು. ಸಿದ್ದರಾಮಯ್ಯ ಸರ್ಕಾರ 5 ವರ್ಷ ಜನಪರ ಕಾರ್ಯಕ್ರಮ ನೀಡಿದೆ. ಇದನ್ನು ಜನತೆ ಮರೆತಿಲ್ಲ. ಹೀಗಾಗಿ ಈ ಉಪಚುನಾವಣೆಗಳಲ್ಲಿ ಸಿದ್ದರಾಮಯ್ಯ ಸರ್ಕಾರದ ಯೋಜನೆಗಳಿಂದ ಪುನಃ ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆಂಬ ವಿಶ್ವಾಸವಿದೆ ಎಂದರು.

ವಾಲ್ಮೀಕಿ ಪುತ್ಥಳಿ ಬಗ್ಗೆ ಗೌಡರ ಮಾತು: ವಿಧಾನಸಭೆಯ ಮುಂದೆ ವಾಲ್ಮಿಕಿ ಪುತ್ಥಳಿ ನಿರ್ಮಿಸಲು ಸಿದ್ದರಾಮಯ್ಯ ಸರ್ಕಾರದಲ್ಲಿ ಉಗ್ರಪ್ಪ ಅವರ ಪಾತ್ರ ಮಹ್ವತವಿದೆ. ಉಗ್ರಪ್ಪ ಉತ್ತಮ ಹೋರಾಟಗಾರರಾಗಿದ್ದಾರೆ ಇಂತವರನ್ನು ಗೆಲ್ಲಿಸುವ ಮೂಲಕ ಮೈತ್ರಿ ಸರ್ಕಾರಕ್ಕೆ ಮತ್ತಷ್ಟು ಬಲ ತುಂಬಿ ಎಂದು ನೆರೆದಿದ್ದ ಕಾರ್ಯಕರ್ತರಿಗೆ ಕರೆ ನೀಡಿದರು.