ವಾಯು  ಚಂಡಮಾರುತ ಅಪ್ಪಳಿಸುತ್ತಿದ್ದು, ಈ ನಿಟ್ಟಿನಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಹೆಚ್ಚಿನ ಮಳೆ ಗಾಳಿ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ನವದೆಹಲಿ: ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತದ ಸ್ವರೂಪ ಪಡೆದುಕೊಂಡಿದೆ. ಇದಕ್ಕೆ ‘ವಾಯು’ ಎಂದು ನಾಮಕರಣ ಮಾಡಲಾಗಿದ್ದು, ಗುರುವಾರ ಬೆಳಗ್ಗೆ ಗುಜರಾತ್‌ ಕರಾವಳಿಯನ್ನು ಅಪ್ಪಳಿಸುವ ಸಾಧ್ಯತೆ ಇದೆ. 

Add Asianetnews Kannada as a Preferred SourcegooglePreferred

 ಗುಜರಾತಿನ ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ಸಾರಲಾಗಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರವುಗೊಳಿಸಲು ಸರ್ಕಾರ ಮುಂದಾಗಿದೆ. ಅಲ್ಲದೇ ಕೇಂದ್ರದಿಂದ ಅಗತ್ಯ ನೆರವು ನೀಡಲಾಗುತ್ತಿದ್ದು, ರಕ್ಷಣಾ ತಂಡಗಳು ಸಕಲ ಉಪಕರಣಗಳೊಂದಿಗೆ ಆಗಮಿಸಿದ್ದಾರೆ. 

ಇನ್ನು ಭಾರೀ ಪ್ರಮಾಣದಲ್ಲಿ ಚಂಡಮಾರುತ ಅಪ್ಪಳಿಸುವ ಮುನ್ನೆಚ್ಚರಿಕಾ ಕ್ರಮವಾಗಿ 2 ದಿನ ಬುಧವಾರ ಹಾಗೂ ಗುರುವಾರ ಕರಾವಳಿ ಜಿಲ್ಲೆಗಳಲ್ಲಿ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಚಂಡಮಾರುತ ಪ್ರಭಾವದಿಂದ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈಗಾಗಲೇ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ಇನ್ನೂ 3 ದಿನ ಭಾರೀ ಮಳೆ ಗಾಳಿ ಬೀಸಲಿದೆ. ಆದರೆ ಕೊಡಗು ಜಿಲ್ಲೆಗೆ ಇದರಿಂದ ಹೆಚ್ಚಿನ ಪರಿಣಾಮ ಉಂಟಾಗುವುದಿಲ್ಲ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.