Asianet Suvarna News Asianet Suvarna News

ನಾಸ್ತಿಕ ಕರುಣಾನಿದಿ ಹೆಸರಲ್ಲಿ ದೇಗುಲ ನಿರ್ಮಾಣ!

ನಾಸ್ತಿಕ ಕರುಣಾನಿದಿ ಹೆಸರಲ್ಲಿ ದೇಗುಲ| ತಮಿಳ್ನಾಡಲ್ಲಿ 30 ಲಕ್ಷ ವೆಚ್ಚದ ದೇಗುಲ ನಿರ್ಮಾಣ

Dalit Community to Build Temple for DMK Leader Karunanidhi in Tamil Nadu
Author
Bangalore, First Published Aug 26, 2019, 10:23 AM IST

ನಮಕ್ಕಲ್‌[ಆ.26]: ನಾಸ್ತಿಕ (ದೇವರನ್ನು ನಂಬದೇ ಇರುವವರು)ರಾಗಿ ಖ್ಯಾತಿ ಹೊಂದಿದ್ದ ಡಿಎಂಕೆ ಅಧಿನಾಯಕ ದಿವಂಗತ ಎಂ.ಕರುಣಾನಿಧಿ ಅವರ ಗೌರವಾರ್ಥವಾಗಿ ದೇವಸ್ಥಾನವೊಂದನ್ನು ನಿರ್ಮಿಸಲು ತಮಿಳುನಾಡಿನ ಗ್ರಾಮಸ್ಥರು ನಿರ್ಧರಿಸಿದ್ದಾರೆ.

ಇಲ್ಲಿನ ಕುಚ್ಚಿಕಾಡು ಗ್ರಾಮದಲ್ಲಿ 30 ಲಕ್ಷ ವೆಚ್ಚದಲ್ಲಿ ದೇವಸ್ಥಾನ ನಿರ್ಮಾಣಕ್ಕೆಂದು ಭೂಮಿ ಪೂಜೆಯನ್ನು ಭಾನುವಾರ ನೆರವೇರಿಸಲಾಯಿತು. 2009 ರಲ್ಲಿ ಕರುಣಾನಿಧಿ ಆಡಳಿತದಲ್ಲಿ ಪರಿಶಿಷ್ಟ ಜಾತಿಯಲ್ಲಿ ಬರುವ ಅರುಂತಥಿಯಾರ್‌ ವರ್ಗಕ್ಕೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.3 ರಷ್ಟುಮೀಸಲಾತಿ ಕಲ್ಪಿಸಿದ್ದರು.

ಇದಕ್ಕೆ ಗೌರವ ಸೂಚಕವಾಗಿ ಆ ವರ್ಗದವರು ಕರುಣಾನಿಧಿ ದೇವಸ್ಥಾನ ನಿರ್ಮಾಣ ಮಾಡುತ್ತಿದ್ದಾರೆ. ಕೊಚ್ಚಿಕೋಡು ಗ್ರಾಮಸ್ಥರು ಭೂಮಿ ದೇಣಿಗೆ ನೀಡಿದ್ದಾರೆ.

Follow Us:
Download App:
  • android
  • ios