ಹಿರಿಯ ಮಗನೊಬ್ಬ ಮುಸ್ಲಿಂ ಯುವತಿಯೊಂದಿಗೆ ಓಡಿ ಹೋಗಿದ್ದ  ಕಾರಣ, ಆತನ ತಂದೆ ಹಾಗೂ ತಮ್ಮನನ್ನು ಮರಕ್ಕೆ ಕಟ್ಟಿ ಹಾಕಿ, ಮನ ಬಂದಂತೆ ಥಳಿಸಿರುವ ಅಮಾನುಷ ಘಟನೆ ವಿಜಯಪುರದಲ್ಲಿ ನಡೆದಿದೆ.

ವಿಜಯಪುರ(ಜೂ.28): ಹಿರಿಯ ಮಗನೊಬ್ಬ ಮುಸ್ಲಿಂ ಯುವತಿಯೊಂದಿಗೆ ಓಡಿ ಹೋಗಿದ್ದ ಕಾರಣ, ಆತನ ತಂದೆ ಹಾಗೂ ತಮ್ಮನನ್ನು ಮರಕ್ಕೆ ಕಟ್ಟಿ ಹಾಕಿ, ಮನ ಬಂದಂತೆ ಥಳಿಸಿರುವ ಅಮಾನುಷ ಘಟನೆ ವಿಜಯಪುರದಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜಿಲ್ಲೆಯ ಸಿಂದಗಿ ತಾಲೂಕಿನ ಹಾಳಗುಂಡಕನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಮರಿಯಪ್ಪ ಎಂಬುವವರ ಪುತ್ರ ನಿಂಗಪ್ಪ ಹರಿಜನ ಎಂಬಾತ ಅದೇ ಗ್ರಾಮದ ಮಾಬುಸಾಬ್ ಎಂಬುವವರ ಪುತ್ರಿ ಮಾಶಾಬಿ ಅನ್ನೋಳ ಜೊತೆ ಪರಾರಿಯಾಗಿದ್ದಾನೆ. ಇದರಿಂದ ರೊಚ್ಚಿಗೆದ್ದ ಮಾಬುಸಾಬ್​ ಹಾಗೂ ಆತನ ಅಣ್ಣ ಅಲ್ಲಾಭಕ್ಷ ಸೇರಿದಂತೆ ಒಟ್ಟು 7 ಜನರ ತಂಡ ಮರಿಯಪ್ಪ ಹಾಗೂ ಆತನ ಚಿಕ್ಕ ಮಗ ರಮೇಶನನ್ನು ಗ್ರಾಮದ ಆಲದ ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ.

ಈ ಅಮಾನವೀಯ ಘಟನೆ ಊರಿನ ನಡು ಬೀದಿಯಲ್ಲೇ ನಡೆಯುತ್ತಿದ್ದರೂ ಸಹ, ಯಾರೊಬ್ಬರೂ ಬಿಡಿಸದೇ ಮೂಕ ಪ್ರೇಕ್ಷಕರಂತೆ ನೋಡುತ್ತಾ ನಿಂತ ದೃಶ್ಯಮೊಬೈಲ್​ನಲ್ಲಿ ಸೆರೆಯಾಗಿದೆ. ಇನ್ನು ಹಲ್ಲೆಯಿಂದ ಮರಿಯಪ್ಪನ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ವಿಜಯಪುರ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.