ಡ್ಯಾಂಗಳಲ್ಲಿನ ನೀರನ್ನು ಕೇವಲ ಕುಡಿಯುವುದಕ್ಕಷ್ಟೇ ಬಳಕೆ ಮಾಡಲು ಕೇಂದ್ರ ಸರ್ಕಾರ ಹಲವು ರಾಜ್ಯಗಳಿಗೆ ಆದೇಶಿಸಿದೆ. 

ನವದೆಹಲಿ: ದೇಶದ ಜಲಾಶಯಗಳಲ್ಲಿ ನೀರಿನ ಮಟ್ಟಭಾರಿ ಪ್ರಮಾಣದಲ್ಲಿ ಕುಸಿತ ಅನುಭವಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಕೇಂದ್ರ ಸರ್ಕಾರ ‘ಬರ ಸಲಹಾವಳಿ’ಗಳನ್ನು ನೀಡಿದೆ. ನೀರನ್ನು ವಿವೇಕಯುತವಾಗಿ ಬಳಸಿಕೊಳ್ಳುವಂತೆ ನಿರ್ದೇಶನ ನೀಡಿದೆ.

Add Asianetnews Kannada as a Preferred SourcegooglePreferred

ಕರ್ನಾಟಕ, ಮಹಾರಾಷ್ಟ್ರ, ಗುಜರಾತ್‌, ತಮಿಳುನಾಡು, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಿಗೆ ಕಳೆದ ವಾರವೇ ಈ ಸಲಹೆ ಬಂದಿದ್ದರೆ, ಶುಕ್ರವಾರ ತಮಿಳುನಾಡಿಗೆ ರವಾನೆಯಾಗಿದೆ ಎಂದು ಕೇಂದ್ರ ಜಲ ಆಯೋಗದ ಸದಸ್ಯ ಎಸ್‌.ಕೆ. ಹಲ್ದಾರ್‌ ಅವರು ತಿಳಿಸಿದ್ದಾರೆ.

ಕಳೆದ 10 ವರ್ಷಗಳ ಸರಾಸರಿಗೆ ಹೋಲಿಸಿದಾಗ ಜಲಾಶಯದಲ್ಲಿ ಶೇ.20ಕ್ಕಿಂತ ಕಡಿಮೆ ನೀರು ಇದ್ದಾಗ ಈ ರೀತಿಯ ಸಲಹಾವಳಿಗಳನ್ನು ಕೇಂದ್ರವು ರಾಜ್ಯಗಳಿಗೆ ರವಾನಿಸುತ್ತದೆ. ನೀರು ರಾಜ್ಯಗಳಿಗೆ ಸಂಬಂಧಿಸಿದ ಅಧಿಕಾರವಾಗಿರುವುದರಿಂದ, ಅಣೆಕಟ್ಟೆಗಳಲ್ಲಿ ನೀರಿನ ಮಟ್ಟಕುಸಿದಾಗ ಅಲ್ಲಿನ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ಬಳಸಬೇಕು ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಲಹೆ ಮಾಡುತ್ತದೆ.