ವಿಧಾನಸೌಧದ ವಜ್ರ ಮಹೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ವಿವಾದಗಳ ನಡುವೆಯೇ  ವಿಧಾನಸೌಧದ  ವಜ್ರ ಮಹೋತ್ಸವದ ಭಾಗವಾಗಿ ಬೆಳಗ್ಗೆ 11ಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವಿಧಾನಮಂಡಲದ ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. 

ಬೆಂಗಳೂರು(ಅ.24): ವಿಧಾನಸೌಧದ ವಜ್ರ ಮಹೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ವಿವಾದಗಳ ನಡುವೆಯೇ ವಿಧಾನಸೌಧದ ವಜ್ರ ಮಹೋತ್ಸವದ ಭಾಗವಾಗಿ ಬೆಳಗ್ಗೆ 11ಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವಿಧಾನಮಂಡಲದ ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. 

Add Asianetnews Kannada as a Preferred SourcegooglePreferred

ಬೆಳಗ್ಗೆ 11 ಗಂಟೆ ವೇಳೆಗೆ ರಾಜಭವನದಿಂದ ವಿಧಾನಸೌಧದವರೆಗೆ ವಿಶೇಷ ಮೆರವಣಿಗೆಯಲ್ಲಿ ರಾಷ್ಟ್ರಪತಿ ಕೋವಿಂದ್​ ಆಗಮಿಸಲಿದ್ದಾರೆ. ರಾಜಭವನದಿಂದ ಆವರಣದಲ್ಲಿರುವ ಕೆಂಗಲ್ ಹನುಮಂತಯ್ಯ ಪ್ರತಿಮೆವರೆಗೆ ರಾಷ್ಟ್ರಪತಿಗಳಿಗೆ ಅಶ್ವಾರೂಢ ಪಡೆ ಬೆಂಗಾವಲಾಗಿರಲಿದೆ. ರಾಷ್ಟ್ರಪತಿಗಳೊಂದಿಗೆ ಸ್ಪೀಕರ್ ಕೆ.ಬಿ. ಕೋಳಿವಾಡ, ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸರ್ಕಾರದ ಎಲ್ಲ ಸಚಿವರು ಸಾಥ್​ ನೀಡಲಿದ್ದಾರೆ. ಒಂದೆಡೆ ವಿಶೇಷ ಅಧಿವೇಶನಕ್ಕೆ ವಿಧಾನಸಭೆ ಸಭಾಂಗಣದಲ್ಲಿ ತಯಾರಿ ನಡೆದಿದ್ದರೆ, ಮತ್ತೊಂದೆಡೆ ವಜ್ರ ಮಹೋತ್ಸವಕ್ಕಾಗಿ ವಿಧಾನಸೌದದ ಕಟ್ಟಡ, ಬೃಹತ್ ಮೆಟ್ಟಿಲು, ಬ್ಯಾಂಕ್ವೆಟ್ ಹಾಲ್ ಗಳಲ್ಲೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ವಜ್ರ ಮಹೋತ್ಸವ ಅಂಗವಾಗಿ ಮಧ್ಯಾಹ್ನ ಊಟದ ಬಳಿಕ 3 ಸಾಕ್ಷ್ಯ ಚಿತ್ರಗಳು ಪ್ರದರ್ಶನಗೊಳ್ಳಲಿವೆ. ಮಾಸ್ಟರ್ ಕಿಶನ್ ನಿರ್ದೇಶನದ 3ಡಿ ವರ್ಚುಯಲ್ ರಿಯಾಲಿಟಿ ವಿಡಿಯೋ ಪ್ರದರ್ಶನ ಇಂದು ಮಧ್ಯಾಹ್ನ 3 ಗಂಟೆಗೆ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದೆ.