ಲೋಕ ಸಮರಕ್ಕೆ ಇಂದೇ ಮುಹೂರ್ತ ಫಿಕ್ಸ್| ಸಂಜೆ 5 ಗಂಟೆಗೆ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ| ದೇಶದ ಚಿತ್ತ ಚುನಾವಣಾ ಆಯೋಗದತ್ತ| ಕರ್ನಾಟಕದಲ್ಲಿ ಎಷ್ಟು ಹಂತದಲ್ಲಿ ಮತದಾನ? ಎಲ್ಲ ಪ್ರಶ್ನೆಗಳಿಗೂ ಇಂದು ಸಂಜೆ 5 ಗಂಟೆಗೆ ಉತ್ತರ|
ನವದೆಹಲಿ(ಮಾ.10): ಲೋಕಸಭಾ ಮಹಾ ಸಮರಕ್ಕೆ ಇಂದೇ ಮುಹೂರ್ತ ಫಿಕ್ಸ್ ಆಗಲಿದ್ದು, ಇಂದು ಸಂಜೆ 5 ಗಂಟೆಗೆ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ನಡೆಯಲಿದೆ.
ದೆಹಲಿಯ ವಿಜ್ಞಾನ ಭವದಲ್ಲಿ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ನಡೆಯಲಿದ್ದು, ದೇಶಾದ್ಯಂತ 8 ಅಥವಾ 9 ಹಂತದಲ್ಲಿ ಚುನಾವಣೆ ನಡೆಸಲು ಆಯೋಗ ಸಿದ್ಧತೆ ನಡೆಸಿದೆ.
Election Commission of India to hold a press conference at 5pm today. pic.twitter.com/M8hrrpQBr4
— ANI (@ANI) March 10, 2019
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯುವ ಸಾಧ್ಯತೆ ಇದ್ದು, ದಿನಾಂಕ ಘೋಷಣೆಯಾದ ಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ.
2014ರ ಹಿನ್ನೋಟ:
2014ರಲ್ಲಿ 9 ಹಂತದಲ್ಲಿ ಏಪ್ರಿಲ್ 7 ರಿಂದ ಮೇ 12ರವರೆಗೆ ಚುನಾವಣೆ ನಡೆದಿತ್ತು. ಕರ್ನಾಟಕದಲ್ಲಿ ಏಪ್ರಿಲ್ 17ರಂದು ಒಂದೇ ಹಂತದಲ್ಲಿ ಮತದಾನವಾಗಿತ್ತು. ಈ ಬಾರಿಯೂ ರಾಜ್ಯದಲ್ಲಿ ಒಂದೇ ಹಂತದ ಮತದಾನದ ದಿನ ನಿಗದಿಯಾಗುವ ಸಾಧ್ಯತೆ ಇದೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Mar 11, 2019, 11:13 AM IST