ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಮುಂದಾದ ರೋಹಿಣಿ ಸಿಂಧೂರಿ
ನಿರಂತರವಾದ ಹೋರಾಟದ ಫಲವಾಗಿ ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ರೋಹಿಣಿ ಸಿಂಧೂರಿ ಮತ್ತೆ ತಮ್ಮ ಖಡಕ್ ಆಡಳಿತಕ್ಕೆ ಚಾಲನೆ ನೀಡಿದ್ದಾರೆ.
ಹಾಸನ : ನಿರಂತರವಾದ ಹೋರಾಟದ ಫಲವಾಗಿ ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ರೋಹಿಣಿ ಸಿಂಧೂರಿ ಮತ್ತೆ ತಮ್ಮ ಖಡಕ್ ಆಡಳಿತಕ್ಕೆ ಚಾಲನೆ ನೀಡಿದ್ದಾರೆ.
ಇದೀಗ ತಾಲೂಕು ಆಡಳಿತಕ್ಕೆ ಚುರುಕು ಮುಟ್ಟಿಸಲು ಮುಂದಾಗಿದ್ದು, ಇಂದಿನಿಂದ ಜು.13ರ ವರೆಗೆ ದೂರು ಸ್ವೀಕಾರ ಕಾರ್ಯಕ್ರಮ ನಡೆಸುತ್ತಿದ್ದಾರೆ.
ಸಾರ್ವಜನಿಕರು ತಮ್ಮ ಯಾವುದೇ ರೀತಿಯ ಕುಂದು ಕೊರತೆಗಳಿದ್ದಲ್ಲಿ ಹಾಸನ ತಾಲೂಕು ಕಚೇರಿ ಆವರಣದಲ್ಲಿ ನಡೆಯುವ ಕುಂದು ಕೊರತೆ ಸಭೆಯಲ್ಲಿ ತಿಳಿಸಬಹುದಾಗಿದೆ.
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಅಧಿಕಾರಿಗಳು, ಸಾರ್ವಜನಿಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.