ಬಿಜೆಪಿ ಮುಖಂಡರಾಗಿರುವ ನಗರ ಪಾಲಿಕೆ ಮಾಜಿ ಶಾಸಕ ಎಂ.ಸಿ.ಚಿಕ್ಕಣ್ಣ ಅವರಿಗೆ .51 ಸಾವಿರ ಮಾನನಷ್ಟಪರಿಹಾರ ನೀಡುವಂತೆ ಶಾಸಕ ಎಂ.ಕೆ.ಸೋಮಶೇಖರ್‌ ಅವರಿಗೆ ಮೈಸೂರು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ.

ಮೈಸೂರು: ಬಿಜೆಪಿ ಮುಖಂಡರಾಗಿರುವ ನಗರ ಪಾಲಿಕೆ ಮಾಜಿ ಶಾಸಕ ಎಂ.ಸಿ.ಚಿಕ್ಕಣ್ಣ ಅವರಿಗೆ .51 ಸಾವಿರ ಮಾನನಷ್ಟಪರಿಹಾರ ನೀಡುವಂತೆ ಶಾಸಕ ಎಂ.ಕೆ.ಸೋಮಶೇಖರ್‌ ಅವರಿಗೆ ಮೈಸೂರು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶಾಸಕ ಸೋಮಶೇಖರ್‌ ಅವರು ತಾನು ಪ.ಪಂಗಡಕ್ಕೆ ಸೇರಿದವನೆಂದು ಸುಳ್ಳು ಪ್ರಮಾಣ ಪತ್ರ ಸಲ್ಲಿಸಿ ಇಂಡಿಯನ್‌ ಆಯಿಲ್ ಕಾರ್ಪೊರೇಷನ್‌ ಸಂಸ್ಥೆಯ ಗ್ಯಾಸ್‌ ಏಜೆನ್ಸಿ ಡೀಲರ್‌ಶಿಪ್‌ ಪಡೆದಿದ್ದಾರೆಂದು 2008ರ ಸೆಪ್ಟೆಂಬರ್‌ನಲ್ಲಿ ಪತ್ರಿಕಾ ಹೇಳಿಕೆ ನೀಡಿದ್ದರು. ತಾನು ನಿರುದ್ಯೋಗಿ ಪದವೀಧರರ ಕೋಟಾದಿಂದ ಗ್ಯಾಸ್‌ ಏಜೆನ್ಸಿ ಪಡೆದಿರುವುದಾಗಿ ಸೋಮಶೇಖರ್‌ ವಾದಿಸಿದ್ದರು. ಇಷ್ಟೇ ಅಲ್ಲದೆ ಚಿಕ್ಕಣ್ಣನವರು ನಗರ ಪಾಲಿಕೆಯಲ್ಲಿ ಜೀವನದುದ್ದಕ್ಕೂ ರೋಲ್ ಕಾಲ್ ಮಾಡುತ್ತಿದ್ದುದರಿಂದ ಈವರೆಗೂ ಮೇಯರ್‌ ಆಗಿಲ್ಲ ಎಂದು ಆರೋಪಿಸಿದ್ದರು.

ಈ ವಿಷಯ ಪತ್ರಿಕೆಗಳಲ್ಲಿ ಪ್ರಕಟಗೊಂಡಿತ್ತು. ಈ ವಿಚಾರವಾಗಿ ಸೋಮಶೇಖರ್‌ ಮೊಕದ್ದಮೆ ಹೂಡಿದ್ದರು. ಎಂ.ಸಿ. ಚಿಕ್ಕಣ್ಣ ಅವರ ಪರವಾಗಿ ವಕೀಲ ಸಿ.ವಿ. ಕೇಶವಮೂರ್ತಿ ವಾದಿಸಿದ್ದರು.