ನವದೆಹಲಿ (ಮೇ. 09): ಸೇನಾ ಸಿಬ್ಬಂದಿ ಅಥವಾ ಗಣ್ಯವ್ಯಕ್ತಿಗಳು ಮೃತಪಟ್ಟ ವೇಳೆ ತ್ರಿವರ್ಣ ಧ್ವಜ ಹೊದೆಸಿ ಅಂತ್ಯಕ್ರಿಯೆ ನಡೆಸುವ ಪರಿಪಾಠವಿದೆ. ಆದರೆ, ದೆಹಲಿ ಪೊಲೀಸರು ಮೃತ ನವಿಲೊಂದಕ್ಕೆ ತ್ರಿವರ್ಣ ಧ್ವಜ ಹೊದೆಸಿ ಅಂತ್ಯ ಕ್ರಿಯೆ ನೆರವೇರಿಸಿರುವುದು ವಿವಾದಕ್ಕೀಡಾಗಿದೆ. ದೆಹಲಿ ಹೈಕೋರ್ಟ್‌ನ ಹೊರಗಡೆ ರಸ್ತೆಯೊಂದರಲ್ಲಿ ಅಪಘಾತಕ್ಕೆ ಒಳಗಾಗಿದ್ದ ನವಿಲನ್ನು ಪೊಲೀಸರು ರಕ್ಷಿಸಿದ್ದರು.ಆದರೆ, ಗಾಯದಿಂದಾಗಿ ನವಿಲು ಶುಕ್ರವಾರ ಸಾವನ್ನಪ್ಪಿತ್ತು. ನವಿಲು ಭಾರತದ ರಾಷ್ಟ್ರೀಯ ಪಕ್ಷಿಯಾದ ಕಾರಣ ನಿಯಮಾವಳಿಯಂತೆ ಪೊಲೀಸರು ಸರ್ಕಾರಿ ಗೌರವಗಳೊಂದಿಗೆ ತ್ರಿವರ್ಣ ಧ್ವಜ ಹೊದೆಸಿ ಮರದ ಪೆಟ್ಟಿಗೆಯಲ್ಲಿಟ್ಟು  ಅಂತ್ಯಕ್ರಿಯೆ ನೆರವೇರಿಸಿದ್ದರು.  

ನವದೆಹಲಿ (ಮೇ. 09): ಸೇನಾ ಸಿಬ್ಬಂದಿ ಅಥವಾ ಗಣ್ಯವ್ಯಕ್ತಿಗಳು ಮೃತಪಟ್ಟ ವೇಳೆ ತ್ರಿವರ್ಣ ಧ್ವಜ ಹೊದೆಸಿ ಅಂತ್ಯಕ್ರಿಯೆ ನಡೆಸುವ ಪರಿಪಾಠವಿದೆ. ಆದರೆ, ದೆಹಲಿ ಪೊಲೀಸರು ಮೃತ ನವಿಲೊಂದಕ್ಕೆ ತ್ರಿವರ್ಣ ಧ್ವಜ ಹೊದೆಸಿ ಅಂತ್ಯ ಕ್ರಿಯೆ ನೆರವೇರಿಸಿರುವುದು ವಿವಾದಕ್ಕೀಡಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದೆಹಲಿ ಹೈಕೋರ್ಟ್‌ನ ಹೊರಗಡೆ ರಸ್ತೆಯೊಂದರಲ್ಲಿ ಅಪಘಾತಕ್ಕೆ ಒಳಗಾಗಿದ್ದ ನವಿಲನ್ನು ಪೊಲೀಸರು ರಕ್ಷಿಸಿದ್ದರು.ಆದರೆ, ಗಾಯದಿಂದಾಗಿ ನವಿಲು ಶುಕ್ರವಾರ ಸಾವನ್ನಪ್ಪಿತ್ತು. ನವಿಲು ಭಾರತದ ರಾಷ್ಟ್ರೀಯ ಪಕ್ಷಿಯಾದ ಕಾರಣ ನಿಯಮಾವಳಿಯಂತೆ ಪೊಲೀಸರು ಸರ್ಕಾರಿ ಗೌರವಗಳೊಂದಿಗೆ ತ್ರಿವರ್ಣ ಧ್ವಜ ಹೊದೆಸಿ ಮರದ ಪೆಟ್ಟಿಗೆಯಲ್ಲಿಟ್ಟು ಅಂತ್ಯಕ್ರಿಯೆ ನೆರವೇರಿಸಿದ್ದರು.