ಆಮ್ ಆದ್ಮಿ ಪಕ್ಷದ 20 ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಹೊಸದಿಲ್ಲಿ: ಆಮ್ ಆದ್ಮಿ ಪಕ್ಷದ 20 ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದೆ.
Add Asianetnews Kannada as a Preferred Source

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಮಹತ್ವದ ಗೆಲುವು ಸಿಕ್ಕಿದೆ. ಮತ್ತೊಮ್ಮೆ ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ಕೇಂದ್ರ ಚುನಾವಣಾ ಆಯೋಗಕ್ಕೆ ಆದೇಶ ನೀಡಿದೆ.
ಲಾಭದಾಯಕ ಹುದ್ದೆ ಆರೋಪದಡಿಯಲ್ಲಿ 20 ಶಾಸಕರನ್ನು ಚುನಾವಣಾ ಆಯೋಗ ಅನರ್ಹಗೊಳಿಸಿತ್ತು. ಈ ಅನರ್ಹತೆ ಆದೇಶವನ್ನು ದೆಹಲಿ ಹೈಕೋರ್ಟ್ ರದ್ದುಗೊಳಿಸಿದೆ. ಪ್ರಕರಣದ ವಿಚಾರಣೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿದೆ.
