ಕಳೆದ  ಹದಿನೈದು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗಗಳು ದಿನದಿಂದ ದಿನಕ್ಕೆ ತೀವ್ರ ಕುತೂಹಲ ಕೆರಳಿಸುತ್ತಿದೆ. ಇದೀಗ ಈ ರಾಜ್ಯ ರಾಜಕಾರಣದ ಬಿಕ್ಕಟ್ಟು ದೆಹಲಿಗೆ ಶಿಫ್ಟ್ ಆಗಿದೆ.

ಬೆಂಗಳೂರು, (ಸೆ.19): ಕಳೆದ ಹದಿನೈದು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗಗಳು ದಿನದಿಂದ ದಿನಕ್ಕೆ ತೀವ್ರ ಕುತೂಹಲ ಕೆರಳಿಸುತ್ತಿದೆ.<br/> <br/>ಇದೀಗ ಈ ರಾಜ್ಯ ರಾಜಕಾರಣದ ಬಿಕ್ಕಟ್ಟು ದೆಹಲಿಗೆ ಶಿಫ್ಟ್ ಆಗಿದೆ. ಇಂದು (ಬುಧವಾರ) ಸಂಜೆ 5ಕ್ಕೆ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ನೆತೃತ್ವದಲ್ಲಿ ಪರಮೇಶ್ವರ್, ದಿನೇಶ್ ಗುಂಡೂರಾವ್ ಸೇರಿದಂತೆ ಇತರೆ ರಾಜ್ಯ ನಾಯಕರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ.

Add Asianetnews Kannada as a Preferred SourcegooglePreferred

"

ಈ ಬಗ್ಗೆ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಂ, ಇಂದು ರಾಹುಲ್ ಗಾಂಧಿ ಅವರ ಜೊತೆ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ಸಂಪುಟ ವಿಸ್ತರಣೆ, ಬಿಬಿಎಂಪಿ ಮೇಯರ್ ಚುನಾವಣೆ ಸೇರಿದಂತೆ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಕುರಿತು ಚರ್ಚೆಗಳು ಮಾಡಲಿದ್ದೇವೆ ಎಂದು ಹೇಳಿದರು.