ಆಗದ ಸಂಪುಟ ವಿಸ್ತರಣೆ : ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ
ರಾಜ್ಯದಲ್ಲಿ ಸರ್ಕಾರ ರಚನೆಯಾಗಿ ತಿಂಗಳು ಕಳೆಯುತ್ತಾ ಬಂದರೂ ಸಚಿವ ಸಂಪುಟ ವಿಸ್ತರಣೆಯಾಗಿಲ್ಲ. ಈ ನಿಟ್ಟಿನಲ್ಲಿ ಈ ಬಾರಿ ಜಿಲ್ಲಾಧಿಕಾರಿಗಳೇ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಬೆಂಗಳೂರು [ಆ.13] : ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿ ತಿಂಗಳಾಗುತ್ತಾ ಬಂದರೂ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಿಲ್ಲ.
ಮುಖ್ಯಮಂತ್ರಿ ಓರ್ವರೇ ಸದ್ಯ ಅಧಿಕಾರ ನಿರ್ವಹಿಸುತ್ತಿದ್ದು, ಯಾವ ಖಾತೆಯ ನಿರ್ವಹಣೆ ಹೊಣೆಯನ್ನು ಯಾರಿಗೂ ವಹಿಸಿಲ್ಲ. ಜಿಲ್ಲೆಗಳ ಉಸ್ತುವಾರಿ ಸಚಿವರುಗಳ ನೇಮಕವೂ ಆಗಿಲ್ಲ. ಈ ನಿಟ್ಟಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಸಚಿವರಿಂದ ಆಗಬೇಕಿದ್ದ ಧ್ವಜಾರೋಹಣ ಈ ಬಾರೀ ಜಿಲ್ಲಾಧಿಕಾರಿಗಳಿಂದಲೇ ಆಗಲಿದೆ.
ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, 2019ನೇ ಸಾಲಿನ ಸ್ವಾತಂತ್ರ್ಯ ದಿನಾಚರಣೆಯನ್ನು ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಉಪ ವಿಭಾಗಗಳಲ್ಲಿ ಮತ್ತು ತಾಲೂಕುಗಳಲ್ಲಿ ತಹಶೀಲ್ದಾರರು ಧ್ವಜಾರೋಹಣ ಮಾಡಲು ಸೂಚಿಸಿದ್ದಾರೆ.
ಅಲ್ಲದೇ ಈ ಭಾರೀ ರಾಜ್ಯದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಸರಳವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸುವಂತೆ ಸೂಚನೆ ನೀಡಲಾಗಿದೆ.