Asianet Suvarna News Asianet Suvarna News

ತೇಜ್ ರಾಜ್ ಶರ್ಮ ಬಗ್ಗೆ ಹೊರ ಬಿದ್ದಿದೆ ಇನ್ನಷ್ಟು ಹೊಸ ವಿಚಾರ; ದೂರುಗಳನ್ನು ಗಂಭೀರವಾಗಿ ಪರಿಗಣಿಸದೇ ಇದ್ದದ್ದೇ ಲೋಕಾಯುಕ್ತರಿಗೆ ಮುಳುವಾಯ್ತಾ?

ಲೋಕಾಯುಕ್ತ ವಿಶ್ವನಾಥ್ ಶೆಟ್ಟಿಯನ್ನು ಚಾಕುವಿನಿಂದ ಇರಿದು  ಬಂಧನಕ್ಕೊಳಗಾಗಿರುವ ತೇಜ್ ರಾಜ್ ಶರ್ಮನ ಬಗ್ಗೆ  ಹೊಸ ಹೊಸ ಮಾಹಿತಿಗಳು ಹೊರ ಬಿದ್ದಿವೆ.  ಪದೇ ಪದೇ  ಇವರು ಲೋಕಾಯುಕ್ತಕ್ಕೆ  ದೂರು ನೀಡುತ್ತಿದ್ದರು. ಇವನು‌ ಕೊಟ್ಟ ದೂರಿನಲ್ಲಿ ಇವನನ್ನೇ ಸಿಕ್ಕಿ ಹಾಕಿಸೋ ಪ್ರಯತ್ನ ಮಾಡಿದ್ದರು ಸರ್ಕಾರಿ ಅಧಿಕಾರಿಗಳು. 

Details of Tej Raj Sharma who Stabbed Lokayukta

ಬೆಂಗಳೂರು (ಮಾ. 07): ಲೋಕಾಯುಕ್ತ ವಿಶ್ವನಾಥ್ ಶೆಟ್ಟಿಯನ್ನು ಚಾಕುವಿನಿಂದ ಇರಿದು  ಬಂಧನಕ್ಕೊಳಗಾಗಿರುವ ತೇಜ್ ರಾಜ್ ಶರ್ಮನ ಬಗ್ಗೆ  ಹೊಸ ಹೊಸ ಮಾಹಿತಿಗಳು ಹೊರ ಬಿದ್ದಿವೆ.  ಪದೇ ಪದೇ  ಇವರು ಲೋಕಾಯುಕ್ತಕ್ಕೆ  ದೂರು ನೀಡುತ್ತಿದ್ದರು. ಇವನು‌ ಕೊಟ್ಟ ದೂರಿನಲ್ಲಿ ಇವನನ್ನೇ ಸಿಕ್ಕಿ ಹಾಕಿಸೋ ಪ್ರಯತ್ನ ಮಾಡಿದ್ದರು ಸರ್ಕಾರಿ ಅಧಿಕಾರಿಗಳು. 

ಆರೋಪಿತರು ಈತನ ಅಕೌಂಟ್ ಗೆ 50,000  ಹಣ ಹಾಕಿ ಬ್ಲಾಕ್ ಮೇಲೆ ಆರೋಪ ಮಾಡಿದ್ರು.  ಇದರ ಬಗ್ಗೆಯೂ  ಸಹ  ತೇಜ್ ರಾಜ್ ಶರ್ಮಾ ಲೋಕಾಯುಕ್ತರ ಗಮನಕ್ಕೆ ತಂದಿದ್ದರು. ಆದರೆ ಇದರ ಬಗ್ಗೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ.  ಆರೋಪಿತರ ಕೈ ಮೇಲಾಗಿದ್ದು ತೇಜ್ ರಾಜ್’ನನ್ನು  ಖಿನ್ನತೆಗೆ ದೂಡಿತ್ತು.  ಪದೇ ಪದೇ ಲೋಕಾಯುಕ್ತ ಕಚೇರಿಗೆ  ಭೇಟಿ‌ ಮಾಡಿದ್ರು ತನಿಖೆ ಪ್ರಗತಿ ಕಾಣದ ಹಿನ್ನಲೆಯಲ್ಲಿ ಲೋಕಾಯುಕ್ತರ ಭೇಟಿಗೆ ನಿರ್ಧರಿಸಿದ್ದ. 

ಇಂದು ಲೋಕಾಯುಕ್ತರನ್ನು ಭೇಟಿ ಮಾಡಿ ಈ ಬಗ್ಗೆಯು ಚರ್ಚೆ ನಡೆಸಿದ. ಅದರೆ ಇದನ್ನು ಲೋಕಾಯುಕ್ತರು ಗಂಭೀರವಾಗಿ ಪರಿಗಣಿಸದೇ ಇದ್ದುದರಿಂದ ಕೋಪಕ್ಕೆ ಒಳಗಾಗಿ ಚಾಕು ಇರಿದಿದ್ದಾನೆ. 

Follow Us:
Download App:
  • android
  • ios