ಲೋಕಾಯುಕ್ತ ವಿಶ್ವನಾಥ್ ಶೆಟ್ಟಿಯನ್ನು ಚಾಕುವಿನಿಂದ ಇರಿದು  ಬಂಧನಕ್ಕೊಳಗಾಗಿರುವ ತೇಜ್ ರಾಜ್ ಶರ್ಮನ ಬಗ್ಗೆ  ಹೊಸ ಹೊಸ ಮಾಹಿತಿಗಳು ಹೊರ ಬಿದ್ದಿವೆ.  ಪದೇ ಪದೇ  ಇವರು ಲೋಕಾಯುಕ್ತಕ್ಕೆ  ದೂರು ನೀಡುತ್ತಿದ್ದರು. ಇವನು‌ ಕೊಟ್ಟ ದೂರಿನಲ್ಲಿ ಇವನನ್ನೇ ಸಿಕ್ಕಿ ಹಾಕಿಸೋ ಪ್ರಯತ್ನ ಮಾಡಿದ್ದರು ಸರ್ಕಾರಿ ಅಧಿಕಾರಿಗಳು. 

ಬೆಂಗಳೂರು (ಮಾ. 07): ಲೋಕಾಯುಕ್ತ ವಿಶ್ವನಾಥ್ ಶೆಟ್ಟಿಯನ್ನು ಚಾಕುವಿನಿಂದ ಇರಿದು ಬಂಧನಕ್ಕೊಳಗಾಗಿರುವ ತೇಜ್ ರಾಜ್ ಶರ್ಮನ ಬಗ್ಗೆ ಹೊಸ ಹೊಸ ಮಾಹಿತಿಗಳು ಹೊರ ಬಿದ್ದಿವೆ. ಪದೇ ಪದೇ ಇವರು ಲೋಕಾಯುಕ್ತಕ್ಕೆ ದೂರು ನೀಡುತ್ತಿದ್ದರು. ಇವನು‌ ಕೊಟ್ಟ ದೂರಿನಲ್ಲಿ ಇವನನ್ನೇ ಸಿಕ್ಕಿ ಹಾಕಿಸೋ ಪ್ರಯತ್ನ ಮಾಡಿದ್ದರು ಸರ್ಕಾರಿ ಅಧಿಕಾರಿಗಳು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆರೋಪಿತರು ಈತನ ಅಕೌಂಟ್ ಗೆ 50,000 ಹಣ ಹಾಕಿ ಬ್ಲಾಕ್ ಮೇಲೆ ಆರೋಪ ಮಾಡಿದ್ರು. ಇದರ ಬಗ್ಗೆಯೂ ಸಹ ತೇಜ್ ರಾಜ್ ಶರ್ಮಾ ಲೋಕಾಯುಕ್ತರ ಗಮನಕ್ಕೆ ತಂದಿದ್ದರು. ಆದರೆ ಇದರ ಬಗ್ಗೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಆರೋಪಿತರ ಕೈ ಮೇಲಾಗಿದ್ದು ತೇಜ್ ರಾಜ್’ನನ್ನು ಖಿನ್ನತೆಗೆ ದೂಡಿತ್ತು. ಪದೇ ಪದೇ ಲೋಕಾಯುಕ್ತ ಕಚೇರಿಗೆ ಭೇಟಿ‌ ಮಾಡಿದ್ರು ತನಿಖೆ ಪ್ರಗತಿ ಕಾಣದ ಹಿನ್ನಲೆಯಲ್ಲಿ ಲೋಕಾಯುಕ್ತರ ಭೇಟಿಗೆ ನಿರ್ಧರಿಸಿದ್ದ. 

ಇಂದು ಲೋಕಾಯುಕ್ತರನ್ನು ಭೇಟಿ ಮಾಡಿ ಈ ಬಗ್ಗೆಯು ಚರ್ಚೆ ನಡೆಸಿದ. ಅದರೆ ಇದನ್ನು ಲೋಕಾಯುಕ್ತರು ಗಂಭೀರವಾಗಿ ಪರಿಗಣಿಸದೇ ಇದ್ದುದರಿಂದ ಕೋಪಕ್ಕೆ ಒಳಗಾಗಿ ಚಾಕು ಇರಿದಿದ್ದಾನೆ.