Asianet Suvarna News Asianet Suvarna News

5 ದಿನ ಕೆಲವು ರೈಲು ಸಂಚಾರ ರದ್ದು

ಕೆಲ ರೈಲುಗಳ ಸಂಚಾರವನ್ನು ಐದು ದಿನಗಳ ಕಾಲ ರದ್ದು ಮಾಡಲಾಗಿದೆ. ರೈಲು ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿ ಹಿನ್ನೆಲೆ ರದ್ದು ಮಾಡಲಾಗುತ್ತಿದೆ. 

Development Work Train Operation hits in Karnataka
Author
Bengaluru, First Published Jul 3, 2019, 8:26 AM IST

ಬೆಂಗಳೂರು[ಜು.3] : ನೈಋುತ್ಯ ರೈಲ್ವೆಯು ನಗರದ ಬೈಯಪ್ಪನಹಳ್ಳಿ ರೈಲು ನಿಲ್ದಾಣದ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಜು.3ರಿಂದ 7ರ ವರೆಗೆ ಈ ಮಾರ್ಗದಲ್ಲಿ ಸಂಚರಿಸುವ ಕೆಲ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ.

ಬೆಂಗಳೂರು ಕಂಟೋನ್‌ಮೆಂಟ್‌-ವಿಜಯವಾಡ- ಬೆಂಗಳೂರು ಕಂಟೋನ್‌ಮೆಂಟ್‌ ಪ್ಯಾಸೆಂಜರ್‌ ರೈಲು (ಸಂಖ್ಯೆ 56503/56504) ಸಂಚಾರವನ್ನು ಜು.3ರಿಂದ ಜು.7ರ ವರೆಗೆ ರದ್ದುಗೊಳಿಸಲಾಗಿದೆ. ಅಂತೆಯೆ ವೈಟ್‌ಫೀಲ್ಡ್‌-ಬಾಣಸವಾಡಿ-ವೈಟ್‌ಫೀಲ್ಡ್‌ ರೈಲು (ಸಂಖ್ಯೆ 06577/06578), ಬಾಣಸವಾಡಿ- ಹೊಸೂರು-ಬಾಣಸವಾಡಿ ಡೆಮು ರೈಲು (ಸಂಖ್ಯೆ06571/07572, 06573/06574) ಸಂಚಾರವನ್ನು ಜು.3ರಿಂದ ಜು.6ರ ವರೆಗೆ ರದ್ದುಗೊಳಿಸಲಾಗಿದೆ. 

ಸಂಬಲ್‌ಪುರ್‌-ಬಾಣಸವಾಡಿ ವಿಶೇಷ ರೈಲು( ಸಂಖ್ಯೆ 08301) ಜು.3, 10 ಹಾಗೂ 17ರಂದು ಕೃಷ್ಣರಾಜಪುರಂ ವರೆಗೆ ಮಾತ್ರ ಸಂಚರಿಸಲಿದೆ. ಅಲ್ಲದೆ, ಬಾಣಸವಾಡಿ-ಸಂಬಲ್‌ಪುರ ವಿಶೇಷ ರೈಲು ಜು.4, 11 ಹಾಗೂ 18ರಂದು ಬಾಣಸವಾಡಿ ಬದಲು ಕೃಷ್ಣರಾಜಪುರಂ ರೈಲು ನಿಲ್ದಾಣ ದಿಂದ ಹೊರಡಲಿದೆ ಎಂದು ನೈಋುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

Follow Us:
Download App:
  • android
  • ios