ಹುಟ್ಟುಹಬ್ಬದಂದೇ ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಶೃಂಗೇರಿಯಲ್ಲಿ..
ಬೆಂಗಳೂರಿನ ಗಾಂಧಿನಗರ ಶಾಸಕ ದಿನೇಶ್ ಗುಂಡೂರಾವ್ ಅವರಿಗಿಂದು ಡಬಲ್ ಧಮಾಕಾ. ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಅವರನ್ನು ಇಂದು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿ, ಕಾಂಗ್ರೆಸ್ ಅಧಿಕೃತ ಘೋಷನೆ ಹೊರಡಿಸಿದೆ. ಈ ಸಂದರ್ಭದಲ್ಲಿ ತಮ್ಮ ಕುಟಂಬದ ಸದಸ್ಯರೊಂದಿಗೆ ಶೃಂಗೇರಿಗೆ ಭೇಟಿ ನೀಡದ ಅವರು ಶಾರದಾಂಬೆ ದರ್ಶನ ಪಡೆದರು.
ಹುಟ್ಟುಹಬ್ಬದಂದೇ ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ದಿನೇಶ್ ಗುಂಡೂರಾವ್.
ಧರ್ಮಪತ್ನಿ ಟಬು ರಾವ್ ಹೆಸರಿನಲ್ಲಿಯೂ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ವಿಶೇಷ ಪೂಜೆಯನ್ನು ಸಲ್ಲಿಸುವ ವೇಳೆ ಪತ್ನಿ, ಮಕ್ಕಳೊಂದಿಗೆ ಕೆಪಿಸಿಸಿ ರಾಜ್ಯ ವೈದ್ಯಕೀಯ ಘಟಕದ ಪ್ರಧಾನ ಕಾರ್ಯದರ್ಶಿ ಡಾ.ನಿರಂತರ ಗಣೇಶ್ ಉಪಸ್ಥಿತರಿದ್ದರು.
ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ದಿನೇಶ್ ಕುಟುಂಬ, ಶ್ರೀ ಜಗದ್ಗುರುಗಳ ಆಶೀರ್ವಾದ ಪಡೆಯಿತು.
ರಾಜ್ಯ ಕೆಪಿಸಿಸಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶಾಸಕ ದಿನೇಶ್ ಗುಂಡೂರಾವ್ ಅವರು ತಮ್ಮ ಕುಟುಂಬ ಸಮೇತರಾಗಿ ಶೃಂಗೇರಿ ಶಾರದಾಂಬೆ ದರ್ಶನ ಪಡೆದು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ವಿಶೇಷ ಪೂಜೆಯ ನಂತರ ಭಾರತಿ ತೀರ್ಥ ಸ್ವಾಮೀಜಿಯ ದರ್ಶನ ಪಡೆದು ಕುಟುಂಬದ ಎಲ್ಲ ಸದಸ್ಯರು ಆಶೀರ್ವಾದ ಪಡೆದರು.
ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಹಾಗೂ ಮಕ್ಕಳಾದ ಅನನ್ಯ ರಾವ್ ಮತ್ತು ಅಮಿರಾ ರಾವ್ ಈ ಸಂದರ್ಭದಲ್ಲಿ ಅವರ ಜತೆಗಿದ್ದರು.