ಇದೇ ಕಾರಣಕ್ಕಾಗಿ ಅವರು 1999ರ ವಿಧಾನಸಭೆ ಚುನಾವಣೆಗೆ ಗೌರಿಬಿದನೂರು ಕ್ಷೇತ್ರದಿಂದ ಜೆಡಿಯು ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು.

ಹೆಸರಾಂತ ಚಲನಚಿತ್ರ- ಧಾರಾವಾಹಿ ನಿರ್ದೇಶಕ ಟಿ.ಎನ್. ಸೀತಾರಾಂ ಅವರು ವಿಧಾನಸಭೆ ಪ್ರವೇಶಿಸಿ, ಜನಸೇವೆ ಮಾಡುವ ಬಯಕೆ ಹೊಂದಿದ್ದರು. ಇದೇ ಕಾರಣಕ್ಕಾಗಿ ಅವರು 1999ರ ವಿಧಾನಸಭೆ ಚುನಾವಣೆಗೆ ಗೌರಿಬಿದನೂರು ಕ್ಷೇತ್ರದಿಂದ ಜೆಡಿಯು ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು.

Add Asianetnews Kannada as a Preferred SourcegooglePreferred

ಆದರೆ ಅವರಿಗೆ ಅದೃಷ್ಟ ಕೈಹಿಡಿಯಲಿಲ್ಲ. ನಾಲ್ಕನೇ ಸ್ಥಾನಕ್ಕೆ ಅವರು ಕುಸಿದರು. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ, ಹಾಲಿ ವಿಧಾನಸಭೆ ಉಪಸ್ಪೀಕರ್ ಎನ್.ಎಚ್. ಶಿವಶಂಕರರೆಡ್ಡಿ ಅವರು ಆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದವು.