ಹಾವೇರಿ ಕಾಂಗ್ರೆಸ್ನಲ್ಲಿ ಭಿನ್ನಮತವಿರುವುದು ಮತ್ತೊಮ್ಮೆ ಸಾಬೀತಾಗಿದೆ. ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಭೇಟಿ ನೀಡಿದ ವೇಳೆಯೇ ಕ್ಷುಲ್ಲಕ ಕಾರಣಕ್ಕಾಗಿ ಕಾಂಗ್ರೆಸ್ ಮುಖಂಡರಿಬ್ಬರು ಕಚ್ಚಾಡಿಕೊಂಡಿದ್ದಾರೆ.
ಹಾವೇರಿ(ಸೆ.02): ಹಾವೇರಿ ಕಾಂಗ್ರೆಸ್ನಲ್ಲಿ ಭಿನ್ನಮತವಿರುವುದು ಮತ್ತೊಮ್ಮೆ ಸಾಬೀತಾಗಿದೆ. ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಭೇಟಿ ನೀಡಿದ ವೇಳೆಯೇ ಕ್ಷುಲ್ಲಕ ಕಾರಣಕ್ಕಾಗಿ ಕಾಂಗ್ರೆಸ್ ಮುಖಂಡರಿಬ್ಬರು ಕಚ್ಚಾಡಿಕೊಂಡಿದ್ದಾರೆ.
ಎರಡು ದಿನದ ಹಿಂದೆ ಪರಮೇಶ್ವರ್ ನೇತೃತ್ವದಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಸಭೆ ನಡೆದಿತ್ತು. ಸಭೆಯ ನಂತ್ರ ಇಲ್ಲಿನ ಶಿವಶಕ್ತಿ ಪ್ಯಾಲೇಸ್ನಲ್ಲಿ MSIL ನಿರ್ದೇಶಕ ಮಂಜುನಾಥ್ ಮಠಪತಿ ಹಾಗೂ ಮತ್ತೊರ್ವ ಕಾಂಗ್ರೆಸ್ ಮುಖಂಡ, ಪ್ರಕಾಶ್ ಜೈನ್ ನಡುವೆ ಕೊಠಡಿಯ ಸಲುವಾಗಿ ಮಾತಿನ ಚಕಮಕಿ ನಡೆದಿದೆ.
ಗಲಾಟೆ ಕೊನೆಗೆ ಕೈ ಕೈ ಮಿಲಾಯಿಸುವ ಹಂತ ತಲುಪಿದ್ದು, ಅಲ್ಲೇ ಇದ್ದ ಇನ್ನುಳಿದ ಕಾರ್ಯಕರ್ತರು ಮದ್ಯಸ್ಥಿಕೆ ವಹಿಸಿ ಸಮಾಧಾನಪಡಿಸಿದ್ದಾರೆ.
