ತಾರಕಕ್ಕೇರಿದ ಲಿಂಗಾಯತ ಸ್ವಾಮಿಗಳ ಜಗಳ: ಮಾತೆ ಮಹಾದೇವಿ ವಿರುದ್ಧ ಚಾರಿತ್ರ್ಯವಧೆ ಆರೋಪ
ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಆಗ್ರಹಿಸುತ್ತಿರುವ ಮಾತೆ ಮಹಾದೇವಿ ವಿರುದ್ಧ ರಂಭಾಪುರಿ ಶ್ರೀಗಳು ಈಗ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರು(ಜು.29): ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಆಗ್ರಹಿಸುತ್ತಿರುವ ಮಾತೆ ಮಹಾದೇವಿ ವಿರುದ್ಧ ರಂಭಾಪುರಿ ಶ್ರೀಗಳು ಈಗ ಗಂಭೀರ ಆರೋಪ ಮಾಡಿದ್ದಾರೆ.
ಮಾತೆ ಮಹಾದೇವಿ ಹಾಗೂ ಲಿಂಗಾನಂದರ ನಡುವಿನ ಸಂಬಂಧವನ್ನು ರಂಭಾಪುರಿ ಶ್ರೀಗಳು ಅನುಮಾನದ ದೃಷ್ಟಿಯಿಂದ ನೋಡಿದ್ದಾರೆ. ಅಲ್ಲದೆ, ಈ ಸಂಬಂಧ ಪೂರಕ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.
ಮಾತೆ ಮಹಾದೇವಿ ಹಾಗೂ ಲಿಂಗಾನಂದ ನಡುವಿನ ಸಂಬಂಧ ಎಷ್ಟು ಅನೈತಿಕಯಿಂದ ಕೂಡಿದೆ ಎಂಬುದಕ್ಕೆ ಸ್ವತಃ ಲಿಂಗಾನಂದರೇ ಶಿಷ್ಯರೊಬ್ಬರಿಗೆ ಬರೆದ ರಹಸ್ಯ ಪತ್ರದ ಪ್ರತಿಗಳನ್ನು ಬಿಡುಗಡೆ ಮಾಡಿದ್ದಾರೆ. ಪತ್ರದಲ್ಲಿ ಮಾತೆ ಮಹಾದೇವಿ ಮಹಾದೇವಿ ಚಾರಿತ್ರ್ಯಬಗ್ಗೆ ಪ್ರಸ್ತಾಪಿಸಲಾಗಿದೆ. ಲಿಂಗಾನಂದರ ಜೊತೆ ಮಾತೆಗೆ ಅನೈತಿಕ ಸಂಬಂಧವಿದ್ದ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಲಾಗಿದ್ದು, 35 ವರ್ಷಗಳ ಹಿಂದೆ ಪ್ರಕಟವಾದ ಪುಸ್ತಕದಲ್ಲಿದ್ದ ಪತ್ರದ ವಿಚಾರ ಈಗ ಬಯಲಿಗೆಳೆದು ರಂಭಾಪುರಿ ಶ್ರೀಗಳು ಹೊಸ ವಿವಾದವೊಂದಕ್ಕೆ ನಾಂದಿ ಹಾಡಿದ್ದಾರೆ.