Asianet Suvarna News Asianet Suvarna News

13 ದಿನ ಮಂಗಳೂರು ರೈಲು ಸಂಚಾರ ರದ್ದು

ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಮುಂದುವರಿದಿದೆ. ಹಲವೆಡೆ ಭೂ ಕುಸಿತವಾಗಿದ್ದು 13 ದಿನ ಬೆಂಗಳೂರು - ಮಂಗಳೂರು ರೈಲು ಸಂಚಾರ ರದ್ದು ಮಾಡಲಾಗಿದೆ. 

 

Disruption in train services between Mangaluru and Bengaluru
Author
Bengaluru, First Published Aug 11, 2019, 8:29 AM IST

ಬೆಂಗಳೂರು [ಆ.11]:  ಭಾರೀ ಮಳೆಯಿಂದ ಸಕಲೇಶಪುರ- ಸುಬ್ರಹ್ಮಣ್ಯ ಘಟ್ಟಪ್ರದೇಶದಲ್ಲಿ ಸತತ ಭೂಕುಸಿತ ಉಂಟಾಗುತ್ತಿರುವುದರಿಂದ ನೈಋುತ್ಯ ರೈಲ್ವೆಯು ಆ.23ರ ವರೆಗೂ ಬೆಂಗಳೂರು- ಮಂಗಳೂರು ಮಾರ್ಗದ ರೈಲುಗಳ ಸಂಚಾರ ರದ್ದುಗೊಳಿಸಿದೆ. 

ಸಕಲೇಶಪುರ- ಸುಬ್ರಹ್ಮಣ್ಯ ಘಟ್ಟಪ್ರದೇಶದಲ್ಲಿ ಭಾರೀ ಪ್ರಮಾಣದ ಮಳೆ ಆಗುತ್ತಿರುವುದರಿಂದ ಭೂಕುಸಿತ ಉಂಟಾಗಿ ರೈಲ್ವೆ ಹಳಿ ಮೇಲೆ ದೊಡ್ಡ ಪ್ರಮಾಣದ ಕಲ್ಲು, ಮಣ್ಣು, ಮರಗಳು ಬಿದ್ದಿವೆ. 

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕಳೆದ ಐದು ದಿನಗಳಲ್ಲಿ ಈ ಮಾರ್ಗದಲ್ಲಿ 30 ಬಾರಿ ಭೂಕುಸಿತ ಉಂಟಾಗಿದೆ. ರೈಲ್ವೆ ಸಿಬ್ಬಂದಿ ಹಾಗೂ ಕಾರ್ಮಿಕರು ತೆರವು ಕಾರ್ಯಚರಣೆಯಲ್ಲಿ ತೊಡಗಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ರೈಲು ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ ಎಂದು ನೈಋುತ್ಯ ರೈಲ್ವೆ ತಿಳಿಸಿದೆ.

Follow Us:
Download App:
  • android
  • ios