ವಿಶ್ವಾಸಮತಕ್ಕೆ ಡೆಡ್ ಲೈನ್ ಮೇಲೆ ಡೆಡ್ ಲೈನ್ ನೀಡಲಾಗುತ್ತಿದೆ. ಆದರೆ ರಾಜಕೀಯ ಪ್ರಹಸನ ಮಾತ್ರ ಮುಗಿಯುತ್ತಿಲ್ಲ. ಇತ್ತ ಹೇಗಾದರೂ ಮಾಡಿ ಸರ್ಕಾರ ಉಳಿಸಿಕೊಳ್ಳಲು ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಕೊನೆ ಹಂತದ ಯತ್ನದಲ್ಲಿ ತೊಡಗಿದ್ದಾರೆ.

ಬೆಂಗಳೂರು(ಜು.23) : ವಿಶ್ವಾಸಮತಕ್ಕೆ ಮಂಗಳವಾರ ಸಂಜೆ 6 ಗಂಟೆಗೆ ಸ್ವತಃ ಸ್ಪೀಕರ್ ರಮೇಶ್ ಕುಮಾರ್ ಡೆಡ್ ಲೈನ್ ನೀಡಿದ್ದಾರೆ. ಈ ನಿಟ್ಟಿನಲ್ಲಿ ದೋಸ್ತಿ ಪಡೆ ಅಂತಿಮ ಹಂತದ ಪ್ರಯತ್ನ ನಡೆಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸರ್ಕಾರ ಉಳಿಸಲು ಸಚಿವ ಡಿ.ಕೆ.ಶಿವಕುಮಾರ್ ಕೊನೆ ಹಂತದ ಪ್ರಯತ್ನ ಮಾಡಿದ್ದಾರೆ. ವಿಶ್ವಾಸ ಮತ ಸಾಬೀತು ಪಡಿಸಲು ತಲೆ ಕೆಡಿಸಿಕೊಂಡ ಅವರು ಕಲಾಪದಿಂದಲೇ ಹೊರಬಂದು ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ ಮಾಡಿದರು. 

ತಾಜ್ ವೆಸ್ಟೆಂಡ್ ನಲ್ಲಿ ಸಿಎಂ ಕುಮಾರಸ್ವಾಮಿ ಭೇಟಿ ಮಾಡಿದ ಡಿಕೆಶಿ ರಾಜಕೀಯ ಮುಂದಿನ ನಡೆಯ ಬಗ್ಗೆ ಚರ್ಚಿಸಿದರು.

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಒಂದು ವೇಳೆ ವಿಶ್ವಾಸಮತದಲ್ಲಿ ಗೆಲ್ಲಲಾಗದಿದ್ದಲ್ಲಿ ಮೈತ್ರಿ ಪಾಳಯದ ಮುಂದಿನ ನಡೆ ಏನು ಎನ್ನವ ವಿಚಾರವನ್ನು ಟ್ರಬಲ್ ಶೂಟರ್ ಡಿಕೆಶಿ ಸಿಎಂ ಕುಮಾರಸ್ವಾಮಿ ಜೊತೆಗೆ ಗಂಭೀರ ಸಮಾಲೋಚನೆ ನಡೆಸಿದರು.

ಸುವರ್ಣ ನ್ಯೂಸ್ ಆ್ಯಪ್‌ ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ https://bit.ly/32JJ0DE ಕ್ಲಿಕ್ ಮಾಡಿ