ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಅವರು ನಾಮಪತ್ರ ಸಲ್ಲಿಸುವ ಹಿಂದಿನ ದಿನ ಬಿಡದಿಯ ಧ್ಯಾನಪೀಠದ ನಿತ್ಯಾನಂದ ಸ್ವಾಮಿಯ ಆಶೀರ್ವಾದ ಪಡೆದಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ರಾಮನಗರ: ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಅವರು ನಾಮಪತ್ರ ಸಲ್ಲಿಸುವ ಹಿಂದಿನ ದಿನ ಬಿಡದಿಯ ಧ್ಯಾನಪೀಠದ ನಿತ್ಯಾನಂದ ಸ್ವಾಮಿಯ ಆಶೀರ್ವಾದ ಪಡೆದಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

 ಬುಧವಾರ ಸಂಜೆ ಬಿಡದಿಯ ನಿತ್ಯಾನಂದ ಧ್ಯಾನಪೀಠಕ್ಕೆ ತೆರಳಿದ್ದ ಅವರು ಅರ್ಧ ಗಂಟೆಗೂ ಹೆಚ್ಚು ಹೊತ್ತು ನಿತ್ಯಾನಂದ ಜೊತೆ ಚರ್ಚೆ ನಡೆಸಿದ್ದು ಇದೀಗ ಚರ್ಚೆಗೆ ಗ್ರಾಸವಾಗಿದೆ.

ಹೋಗಿದ್ದು ನಿಜ: ಈ ಬಗ್ಗೆ ಕನಕಪುರದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವ ಡಿಕೆಶಿ, ನಾನು ನಿತ್ಯಾನಂದಸ್ವಾಮಿ ಆಶ್ರಮಕ್ಕೆ ಹೋಗಿದ್ದು ನಿಜ. ಅಲ್ಲಿ ನೂರಾರು ಮತಗಳಿದ್ದು ಎಲ್ಲೆಡೆ ಮತ ಯಾಚಿಸಲು ಹೋಗುವಂತೆ ಅಲ್ಲೂ ಹೋಗಿದ್ದೆ ಎಂದು ತಿಳಿಸಿದರು. ನಮಗೆ ಒಂದೆರಡು ಮತಗಳೂ ಅತ್ಯಮೂಲ್ಯ. ಹಾಗಾಗಿ ನಾನು ಮರಳಿಗವಿ ಮಠ ಸೇರಿದಂತೆ ಎಲ್ಲಾ ಮಠಮಾನ್ಯ ಆಶ್ರಮಗಳಿಗೆ ಭೇಟಿ ನೀಡಿ ಮತಯಾಚನೆ ಮಾಡುತ್ತಿದ್ದೇವೆ ಎಂದು ಹೇಳಿದರು.