ಸಿದ್ದರಾಮಯ್ಯ ಹಾಗೂ ಎಚ್.ಡಿ.ದೇವೇಗೌಡ ಅವರ ನಡುವೆ ಸಮರ ನಡೆಯುತ್ತಿದ್ದು, ಈ ಬಗ್ಗೆ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಪ್ರತಿಕ್ರಿಯೆಗೆ ನಿರಾಕರಿಸಿದ್ದಾರೆ. 

ನವದೆಹಲಿ [ಆ.24]: ಮೈತ್ರಿ ಸರ್ಕಾರ ಪತನಗೊಳ್ಳಲು ಸಿದ್ದರಾಮಯ್ಯ ಕಾರಣ ಎಂಬ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಹೇಳಿಕೆ, ಅದಕ್ಕೆ ಪ್ರತಿಕ್ರಿಯೆಯಾಗಿ ದೇವೇಗೌಡರದ್ದು ನೀಚ ರಾಜಕಾರಣ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಿರುಗೇಟು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಾಂಗ್ರೆಸ್‌ ಮುಖಂಡ ಡಿ.ಕೆ.ಶಿವಕುಮಾರ್‌ ಈ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. 

ರಾಜ್ಯ ರಾಜಕೀಯದಲ್ಲಿ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ದೆಹಲಿಯಲ್ಲೇ ಇದ್ದ ಡಿ.ಕೆ.ಶಿವಕುಮಾರ್‌ ಕರ್ನಾಟಕ ಭವನಕ್ಕೆ ಶುಕ್ರವಾರ ಆಗಮಿಸಿದ ವೇಳೆ ಮಾಧ್ಯಮಗಳು ಅವರ ಪ್ರತಿಕ್ರಿಯೆ ಬಯಸಿದಾಗ ಅವರು ಕೈಮುಗಿದು ಸೀದಾ ಭವನದ ಒಳ ಹೋದರು.