ತಮಿಳುನಾಡು ಡಿಎಂಕೆ  ಮುಖಂಡ ಕರುಣಾನಿಧಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರುಣಾನಿಧಿ ಶೀತ ಹಾಗೂ ಅಜೀರ್ಣ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಡಿಸೆಂಬರ್​ 7ರಂದು ಕೂಡ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಮತ್ತೆ ಆರೋಗ್ಯ ಸಮಸ್ಯೆ ಉಲ್ಬಣಗೊಂಡ ಹಿನ್ನೆಲೆಯಲ್ಲಿ  ಆಸ್ಪತ್ರೆಗೆ ದಾಖಲಾಗಿದ್ದಾರೆ.

ಚೆನ್ನೈ(ಡಿ.16): ತಮಿಳುನಾಡು ಡಿಎಂಕೆ ಮುಖಂಡ ಕರುಣಾನಿಧಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕರುಣಾನಿಧಿ ಶೀತ ಹಾಗೂ ಅಜೀರ್ಣ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಡಿಸೆಂಬರ್​ 7ರಂದು ಕೂಡ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಮತ್ತೆ ಆರೋಗ್ಯ ಸಮಸ್ಯೆ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ವಿಚಾರ ತಿಳಿದ ಕೂಡಲೇ ಆಸ್ಪತ್ರೆಗೆ ಪುತ್ರ ಸ್ಟಾಲೀನ್​ ಸೇರಿದಂತೆ ಡಿಎಂಕೆ ಮುಖಂಡರು ದೌಡಾಯಿಸಿ ಕರುಣಾನಿಧಿ ಅವರ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು.