ಬೆಳಗಾವಿ(ಅ.1): ನಿನ್ನೆ ಕಾವೇರಿ ವಿಚಾರದ ವಿಚಾರಣೆ ವೇಳೆ ವಾದ ಮಂಡಿಸದೇ ಕರ್ನಾಟಕ ಪರ ವಕೀಲ ಫಾಲಿ ಎಸ್ ನಾರಿಮನ್ ಹಿಂದೆ ಸರಿದಿದ್ದರು. ಹೀಗಾಗಿ ಕೃಷ್ಣಾ-ಕಾವೇರಿ ನ್ಯಾಯಾಧೀಕರಣದ ವಾದ ಮಂಡಿಸಲು ವಕೀಲರಿಗೆ ನೀಡಿದ ಹಣವನ್ನ ರಾಜ್ಯ ಸರ್ಕಾರ ಮರಳಿ ಪಡೆಯಬೇಕೆಂದು ಆರ್'ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್ ಆಗ್ರಹಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೃಷ್ಣಾ-ಕಾವೇರಿ ನ್ಯಾಯಾಧೀಕರಣಕ್ಕೆ ಸರ್ಕಾರ ಈ ವರೆಗೂ 76 ಕೋಟಿ 21 ಲಕ್ಷ ವೆಚ್ಚ ಮಾಡಿದೆ. ಎರಡೂ ನ್ಯಾಯಾಧೀಕರಣದ ಮುಂದೆ ಸಮರ್ಥ ವಾದ ಮಂಡಿಸುವಲ್ಲಿ ವಕೀಲರು ವಿಫಲರಾಗಿದ್ದಾರೆ. ಸರ್ಕಾರ ಕೋಟಿ ಕೋಟಿ ವೆಚ್ಚ ಮಾಡಿದರು ರಾಜ್ಯಕ್ಕೆ ಹಿನ್ನಡೆ ಆಗುತ್ತಿದೆ ಎಂದು ಗಡಾದ್ ಕಿಡಿಕಾರಿದ್ದಾರೆ.
ನಾರಿಮನ್ ವಾದಕ್ಕೆ ಸರ್ಕಾರ ಭರಿಸಿದ್ದು ಎಷ್ಟು ಕೋಟಿ ಎಂದುಕೊಂಡಿರಿ?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.
Latest Videos
