ಮನೆಗೆ ಬರಲು ನಿರಾಕರಿಸಿದ ಹಿನ್ನೆಲೆಯಲ್ಲಿ ವೈದ್ಯೆಯನ್ನು ವರ್ಗಾವಣೆ ಮಾಡಿದ ಪ್ರಕರಣ ಮೈಸೂರಿನ ಪಿರಿಯಾಪಟ್ಟಣದಲ್ಲಿ ನಡೆದಿದೆ. ಮನೆಗೆ ಬಂದು ಚಿಕಿತ್ಸೆ ನೀಡದ ಹಿನ್ನೆಲೆಯಲ್ಲಿ ವರ್ಗಾವಣೆ ಮಾಡಲಾಗಿದೆ. 

ಮೈಸೂರು :  ಶಾಸಕರ ಮನೆಗೆ ತೆರಳಿ ಟ್ರೀಟ್ಮೆಂಟ್ ಕೊಡದ ಹಿನ್ನೆಲೆಯಲ್ಲಿ ವೈದ್ಯೆಯನ್ನೇ ಎತ್ತಂಗಡಿ ಮಾಡಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಿಂದ ವೈದ್ಯೆಯನ್ನು ಚಿತ್ರದುರ್ಗ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.

Add Asianetnews Kannada as a Preferred SourcegooglePreferred

ಪಿರಿಯಾಪಟ್ಟಣ JDS ಶಾಸಕ ಕೆ ಮಹದೇವ್ ಮನೆಗೆ ಹೋಗಿ ಚಿಕಿತ್ಸೆ ನೀಡಲು ನಿರಾಕರಿಸಿದ್ದರಿಂದ ಪಿರಿಯಾಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯೆ ಡಾ.ವೀಣಾಸಿಂಗ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆ ಮಾಡುವ ಮೂಲಕ ಸೇಡು ತೀರಿಸಿಕೊಂಡಿದ್ದಾರೆ. 

ವೈದ್ಯೆಗೆ ಮನೆಗೆ ಬಂದು ಚಿಕಿತ್ಸೆ ನೀಡಲು ಹೇಳಿದ್ದರು. ಈ ವೇಳೆ ಅವರು ಮನೆ ಬರಲು ನಿರಾಕರಿಸಿದ್ದು, ಇದರಿಂದ ವೈದ್ಯೆಯನ್ನು ತರಾಟೆಗೆ ತೆಗೆದುಕೊಂಡು, ವೈದ್ಯೆ ವಿರುದ್ಧ ವಿಧಾನಸೌಧದಲ್ಲಿ ದೂರು ನೀಡಿದ್ದರು. 

ಆದರೆ ಸರ್ಕಾರದ ಯಾವುದೇ ಸರ್ಕಾರಿ ವೈದ್ಯರು ಆಸ್ಪತ್ರೆ ಬಿಟ್ಟು ಮನೆಗೆ ತೆರಳಿ ಚಿಕಿತ್ಸೆ ನೀಡುವ ಯಾವುದೇ ನಿಯಮವಿಲ್ಲ ಎಂದು ಹೇಳುವ ಮೂಲಕ, ದೂರನ್ನು ತಿರಸ್ಕರಿಸಲಾಗಿತ್ತು. 

ಇದಾಗಿ ಹಲವು ತಿಂಗಳು ಕಳೆದಿದ್ದು, ಇದೀಗ ವೈದ್ಯೆಯನ್ನು ಪಿರಿಯಾಪಟ್ಟಣದಲ್ಲಿ ವೈದ್ಯ ಹುದ್ದೆ ಖಾಲಿ ಇದ್ದರೂ ವರ್ಗಾವಣೆ ಮಾಡಲಾಗಿದೆ. ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ರಾಮಾಪುರದ ಸಮುದಾಯ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ.