Asianet Suvarna News Asianet Suvarna News

ತರೂರ್ ಹಿಂದೂ ಪಾಕಿಸ್ತಾನ ಹೇಳಿಕೆ: ಚುನಾವಣಾ ನಾಟಕವೇ?

ಬಿಜೆಪಿ ಅಧಿಕಾರಕ್ಕೆ ಬಂದ್ರೆ ಭಾರತ ಹಿಂದೂ ಪಾಕಿಸ್ತಾನವಾಗುತ್ತೆ! | ಕಾಂಗ್ರೆಸ್ ನಾಯಕ ಶಶಿ ತರೂರ್ ಗಂಭೀರ ಎಚ್ಚರಿಕೆ| ತರೂರ್ ಹೇಳಿಕೆ ಚುನಾವಣಾ ನಾಟಕವೇ? | ತರೂರ್ ಹೇಳಿಕೆಗೆ ಬಿಜೆಪಿ ಪ್ರತಿಕ್ರಿಯೆ ಏನು?

ಬೆಂಗಳೂರು(ಜು.13): 2019 ರ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ಗೆಲುವು ಸಾಧಿಸಿದರೆ ಭಾರತ ಹಿಂದೂ ಪಾಕಿಸ್ತಾನವಾಗಲಿದೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಎಚ್ಚರಿಸಿದ್ದಾರೆ. ಬಿಜೆಪಿ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಧರ್ಮಗಳ ನಡುವಿನ ಕಂದಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಅವರು ಹೇಳಿದ್ದಾರೆ.

ಅಲ್ಪಸಂಖ್ಯಾತ ಹಿಂದೂಗಳ ಹಕ್ಕನ್ನು ಪಾಕಿಸ್ತಾನ ಗೌರವಿಸುವುದಿಲ್ಲ ಅದೇ ರೀತಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಭಾರತದಲ್ಲಿ ಅಲ್ಪಸಂಖ್ಯಾತರ ಹಕ್ಕುಳಿಗೆ ಚ್ಯುತಿ ಬರಲಿದೆ ಎಂಬುದು ಶಶಿ ತರೂರ್ ವಾದವಾಗಿದೆ. ಮತ್ತೆ ಅಧಿಕಾರಕ್ಕೇರುವ ಹುಮ್ಮಸ್ಸಿನಲ್ಲಿರುವ ಬಿಜೆಪಿ, ದೇಶದ ಸಂವಿಧಾನದಲ್ಲಿ ಬದಲಾವಣೆ ತಂದು ಅಲ್ಪಸಂಖ್ಯಾತರ ಹಕ್ಕುಗಳನ್ನು ಮೊಟಕುಗೊಳಿಸುವ ಹುನ್ನಾರ ನಡೆಸಿದೆ ಎಂದು ತರೂರ್ ಗಂಭೀರ ಆರೋಪ ಮಾಡಿದ್ದಾರೆ.

ಇದಕ್ಕೆ ಅಷ್ಟೇ ಖಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ, ತರೂರ್ ಪ್ರಕಾರ ಬಿಜೆಪಿ ಹಿಂದೂ ಪಾಕಿಸ್ತಾನ ನಿರ್ಮಾಣ ಮಾಡುವುದಾದರೆ ಕಾಂಗ್ರೆಸ್ ಪಕ್ಷವೇನು ಕೇವಲ ಮುಸ್ಲಿಮರಿಗೆ ಸೀಮಿತವಾದ ಪಕ್ಷವೇ ಎಂದು ಪ್ರಶ್ನಿಸಿದೆ.

ಈ ಕುರಿತು ನಿಮ್ಮ ಸುವರ್ಣನ್ಯೂಸ್ ನ ಲೆಫ್ಟ್ ರೈಟ್ ಆ್ಯಂಡ್ ಸೆಂಟರ್ ಕಾರ್ಯಕ್ರಮದಲ್ಲಿ ನಡೆದ ಚರ್ಚೆಯ ಸಂಪೂರ್ಣ ವಿಡಿಯೋ ನಿಮಗಾಗಿ..