ಕೆಆರ್‌ಎಸ್, ಕಬಿನಿಯಿಂದ ನಿತ್ಯ 1.7 ಲಕ್ಷ ಕ್ಯುಸೆಕ್ಸ್ ನೀರು ತಮಿಳುನಾಡಿಗೆ ಈ ನೀರು ಕಾವೇರಿ ನದಿಯ ಕೊನೆಯ ಕಡಲೂರು, ನಾಗಪಟ್ಟಿಣಂ ಜಿಲ್ಲೆಯ ಜನರ ಕೃಷಿಗೆ ಸಿಗದೆ ವ್ಯರ್ಥವಾಗಿ ಸಮುದ್ರಕ್ಕೆ ಚೆಕ್‌ಡ್ಯಾಂನಿರ್ಮಾಣಕ್ಕೆರೈತರಆಗ್ರ

ಬೆಂಗಳೂರು (ಆ. 19): ಕಾವೇರಿ ನೀರಿಗಾಗಿ ಪ್ರತಿ ವರ್ಷ ಕರ್ನಾಟಕದ ಜತೆ ಕಾಲು ಕೆರೆದು ಜಗಳಕ್ಕೆ ನಿಲ್ಲುವ ತಮಿಳುನಾಡು, ಈ ಬಾರಿ ಅಪಾರ ಪ್ರಮಾಣದ ನೀರು ಹರಿದುಬರುತ್ತಿದ್ದರೂ ಅದನ್ನು ವ್ಯರ್ಥವಾಗಿ ಸಮುದ್ರಕ್ಕೆ ಬಿಡುತ್ತಿದೆ. ಈವರೆಗೆ ಸರಿಸುಮಾರು 25 ಟಿಎಂಸಿ ನೀರು ಸಮುದ್ರ ಪಾಲಾಗಿದೆ ಎಂದು ಸ್ವತಃ ಆ ರಾಜ್ಯದ ರೈತರೇ ಆಪಾದಿಸಿದ್ದಾರೆ.

Add Asianetnews Kannada as a Preferred SourcegooglePreferred

ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕಾವೇರಿ ಉಕ್ಕಿ ಹರಿಯುತ್ತಿದೆ. ಕೃಷ್ಣರಾಜಸಾಗರ ಹಾಗೂ ಕಬಿನಿ ಜಲಾಶಯಗಳಿಂದ 1.70 ಲಕ್ಷಕ್ಕೂ ಅಧಿಕ ಕ್ಯುಸೆಕ್ ನೀರು ತಮಿಳುನಾಡಿಗೆ ಹರಿದುಬರುತ್ತಿದೆ. ಆದರೆ ತಮಿಳುನಾಡಿನ ಕಾವೇರಿ ನದಿಯ ಕೊನೆಯ ಭಾಗದಲ್ಲಿರುವ ಕಡಲೂರು ಹಾಗೂ ನಾಗಪಟ್ಟಿಣಂ ಜಿಲ್ಲೆಗಳ ಜನರಿಗೆ ಕಾವೇರಿ ನದಿ ನೀರು ಬಳಕೆಗೆ ಲಭಿಸುತ್ತಿಲ್ಲ. ಜಮೀನಿಗೆ ಹರಿಯದೇ ನೇರವಾಗಿ ಬಂಗಾಳ ಕೊಲ್ಲಿ ಸೇರುತ್ತಿದೆ ಎಂದು ಕಾವೇರಿ ಅಚ್ಚುಕಟ್ಟು ರೈತ ಸಂಘದ ಕಾರ್ಯದರ್ಶಿ ಎಲಂಕೀರನ್ ವೀರಮಣಿ ಅವರು ದೂರಿದ್ದಾರೆ.

ಕರ್ನಾಟಕದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ 2005 ರ ನಂತರ ಇದೇ ಮೊದಲ ಬಾರಿಗೆ ಕಾವೇರಿಯಲ್ಲಿ ಪ್ರವಾಹವೇನೋ ಬಂದಿದೆ. ಆದರೆ ನಾಗಪಟ್ಟಿಣಂ ಜಿಲ್ಲೆಯಲ್ಲಿ ಚೆಕ್ ಡ್ಯಾಂ ಇಲ್ಲದಿರುವುದು ಹಾಗೂ ನಾಲೆಗಳಲ್ಲಿ ಹೂಳು ತುಂಬಿರುವುದರಿಂದ ಈ ನೀರು ರೈತರ ಜಮೀನಿಗೆ ಹರಿಯುವ ಬದಲು ಸಮುದ್ರ ಸೇರುತ್ತಿದೆ. ಕಳೆದ ಜುಲೈನಿಂದ ಈವರೆಗೆ ಸುಮಾರು 25 ಟಿಎಂಸಿ ನೀರು ವ್ಯರ್ಥವಾಗಿ ಬಂಗಾಳ ಕೊಲ್ಲಿ ಪಾಲಾಗಿದೆ ಎಂದು ಅವರು ಹೇಳಿದ್ದಾರೆ.

ತಿರುಚ್ಚಿಯ ಮುಕ್ಕೊಂಬು ಎಂಬ ಸ್ಥಳವನ್ನು ತಲುಪಿದ ಬಳಿಕ ಕಾವೇರಿ ಮೂರು ಭಾಗಗಳಾಗಿ ಕವಲೊಡೆಯುತ್ತದೆ. ಕೊಲ್ಲಿಧಾಮ, ಕಾವೇರಿ, ವೆನ್ನಾರ್ ನದಿಯಾಗಿ ಹರಿಯುತ್ತದೆ. ಈ ಮೂರು ನದಿಗಳ ಪೈಕಿ ಕೊಲ್ಲಿಧಾಮ ಅತ್ಯಂತ ವಿಶಾಲವಾಗಿದ್ದು, 4 ಲಕ್ಷ ಕ್ಯುಸೆಕ್‌ನಷ್ಟು ನೀರು ಒಯ್ಯಬಲ್ಲದು. ಸದ್ಯ ಅಲ್ಲಿ 1.50 ಲಕ್ಷ ಕ್ಯುಸೆಕ್ ನೀರು ಹರಿಯುತ್ತಿದೆ.

ಆದಾಗ್ಯೂ ಕಡಲೂರು ಹಾಗೂ ನಾಗಪಟ್ಟಿಣಂ ಜಿಲ್ಲೆಗಳ 60 ಸಾವಿರ ಎಕರೆ ಪ್ರದೇಶಕ್ಕೆ ನೀರು ಸಿಗುತ್ತಿಲ್ಲ ಎಂದು ದೂರಿದ್ದಾರೆ. ಈ ರೀತಿ ನೀರನ್ನು ವ್ಯರ್ಥವಾಗಿ ಸಮುದ್ರಕ್ಕೆ ಹರಿಸುವ ಬದಲು ಚೆಕ್‌ಡ್ಯಾಂ ನಿರ್ಮಾಣ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಆದರೆ ತಮಿಳುನಾಡಿನಲ್ಲಿ ಚೆಕ್‌ಡ್ಯಾಂ ನಿರ್ಮಾಣ ಮಾಡುವಂತಹ ಭೌಗೋಳಿಕ ಪರಿಸ್ಥಿತಿ ಪೂರಕವಾಗಿಲ್ಲ. ಎಲ್ಲ ನಾಲೆಗಳ ಹೂಳು ತೆಗೆಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ