ಕೇಂದ್ರ ಸರ್ಕಾರ ಜನರ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಇಂತಹ ಸರ್ಕಾರವನ್ನು ಮುಂದಿನ ಚುನಾವಣೆಯಲ್ಲಿ ಯಾರೂ ಕೂಡ ಕ್ಷಮಿಸಬಾರದು ಎಂದು ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಹೇಳಿದ್ದಾರೆ. 

ನವದೆಹಲಿ :  ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿ, ಮುಂದಿನ ಚುನಾವಣೆಯಲ್ಲಿ ಯಾರೂ ಕೂಡ ಕ್ಷಮಿಸಬಾರದು ಎಂದು ಹೇಳಿದ್ದಾರೆ.

Add Asianetnews Kannada as a Preferred SourcegooglePreferred

2019ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನು ಜನ ಕ್ಷಮಿಸುವುದಿಲ್ಲ. ಅವರ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರುವುದು ಸಾಧ್ಯವಿಲ್ಲ. ಎಂದು ಯಶವಂತ್ ಸಿನ್ಹಾ ಹೇಳಿದ್ದಾರೆ.

 ಗುಜರಾತ್ ನ ಜುನಾಗಡ್ ವಂತಾಲಿ ಪ್ರದೇಶದಲ್ಲಿ ನಡೆದ ರೈತರ ಸಮಾವೇಶದಲ್ಲಿ ಮಾತನಾಡಿದ ಅವರು ಈ ರೀತಿಯಾಗಿ ಹೇಳಿದ್ದಾರೆ. 

ಈ ಸರ್ಕಾರ ಜನರ ಬೇಡಿಕೆಗಳನ್ನು, ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಈ ಸರ್ಕಾರ ಅವಧಿಯಲ್ಲಿ ಎಲ್ಲರೂ ಕೂಡ ಸಮಸ್ಯೆ ಎದುರಿಸುತ್ತಿದ್ದಾರೆ. ಇದಕ್ಕೆ ಒಂದೇ ಪರಿಹಾರ ಎಂದರೆ ಮುಂದಿನ ಚುನಾವಣೆಯಲ್ಲಿ ಈ ಸರ್ಕಾರವನ್ನು ಬೇರು ಸಹಿತ ಕಿತ್ತು ಹಾಕುವುದೇ ಎಂದು ಹೇಳಿದ್ದಾರೆ. 

ನಾನು ಜನರಲ್ಲಿ ಕ್ಷಮೆ ಕೇಳುತ್ತೇನೆ. ಯಾಕೆಂದರೆ ಇಂತಹ ಭರವಸೆಗಳನ್ನು ನೀಡುವ ವೇಳೆ ನಾನು ಕೂಡ ಪಕ್ಷದ ಭಾಗವಾಗಿದ್ದೆ ಎಂದು ಹೇಳಿದ್ದಾರೆ.