ಚಿಕ್ಕಮಗಳೂರಿನಲ್ಲಿ ಆ್ಯಂಬುಲೆನ್ಸ್ ಚಾಲಕನೋರ್ವ ಮಾನವೀಯತೆ ಮೆರೆದು ಅಪಘಾತದಿಂದ ಒದ್ದಾಡುತ್ತಿದ್ದವರನ್ನು ರಕ್ಷಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.  

ಚಿಕ್ಕಮಗಳೂರು : ಖಾಸಗಿ ಆ್ಯಂಬುಲೆನ್ಸ್ ಚಾಲಕನೋರ್ವ ಮಾನವೀಯತೆ ಮೆರೆದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. 

Add Asianetnews Kannada as a Preferred SourcegooglePreferred

ಚಿಕ್ಕಮಗಳೂರಿನ ಉಪ್ಪಳ್ಳಿ ನಿವಾಸಿ ಜಿಶಾನ್ ಅಸಾದ್ ಎನ್ನುವ ಆ್ಯಂಬುಲೆನ್ಸ್ ಚಾಲಕ ಅಪಘಾತದಿಂದ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದವರ ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲಿಸಲು ಬಿಡಿಗಾಸನ್ನು ಪಡೆಯದೇ ನೆರವು ನೀಡಿದ್ದಾರೆ. 

ಕೆ.ಎಸ್.ಅರ್.ಟಿ.ಸಿ ಬಸ್ ಮತ್ತು ಮಿನಿ ಟೆಂಪೊ ನಡುವೆ ಡಿಕ್ಕಿ ಸಂಭವಿಸಿದ್ದು, ಈ ಘಟನೆಯಲ್ಲಿ ಟೆಂಪೊದಲ್ಲಿದ್ದ 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.

ಘಟನೆ ಬಳಿಕ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಈ ವೇಳೆ ಗಾಯಾಳುಗಳು ರಕ್ತದ ಮಡುವಿನಲ್ಲಿ ಬಿದ್ದು ನರಳುತ್ತಿದ್ದರು. ಕೂಡಲೇ ಜಿಶಾನ್ ಸ್ಥಳಕ್ಕೆ ಬಂದು ಗಾಯಾಳುಗಳನ್ನು ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಸಹಾಯ ಹಸ್ತ ಚಾಚಿದ್ದಾರೆ.