ಡಿವೈಎಸ್’ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಮರುಜೀವ; ಜಾರ್ಜ್ ವಿರುದ್ಧ ಕ್ರಮ ಕೈಗೊಳ್ತಾರಾ ಸಿಎಂ?
ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಮರುಜೀವ ಬಂದಿದೆ. ಪ್ರಕರಣದ ಎಲ್ಲಾ ಆರೋಪಿಗಳ ಎದೆಯಲ್ಲಿ ಮತ್ತೆ ಢವಢವ ಶುರುವಾಗಿದೆ. ನಾ.ಕೇಶವ್ ನಾರಾಯಣ ವರದಿ ಅಧ್ಯಯನಕ್ಕಾಗಿ ಸಮಿತಿ ರಚನೆಗೆ ಸರ್ಕಾರ ನಿರ್ಧರಿಸಿದೆ. ಸಮಿತಿ ರಚನೆ ಮಾಡಲು ಗೃಹ ಇಲಾಖೆ ಅಧಿಕಾರಿಗಳು ನಿರ್ಧರಿಸಿದ್ದಾರೆ.
ಬೆಂಗಳೂರು (ಜೂ. 22): ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಮರುಜೀವ ಬಂದಿದೆ. ಪ್ರಕರಣದ ಎಲ್ಲಾ ಆರೋಪಿಗಳ ಎದೆಯಲ್ಲಿ ಮತ್ತೆ ಢವಢವ ಶುರುವಾಗಿದೆ.
ನಾ.ಕೇಶವ್ ನಾರಾಯಣ ವರದಿ ಅಧ್ಯಯನಕ್ಕಾಗಿ ಸಮಿತಿ ರಚನೆಗೆ ಸರ್ಕಾರ ನಿರ್ಧರಿಸಿದೆ. ಸಮಿತಿ ರಚನೆ ಮಾಡಲು ಗೃಹ ಇಲಾಖೆ ಅಧಿಕಾರಿಗಳು ನಿರ್ಧರಿಸಿದ್ದಾರೆ.
ನ್ಯಾ. ಕೇಶವ್ ನಾರಯಣ್ ಆಯೋಗ 2018 ರ ಫೆಬ್ರವರಿಯಲ್ಲಿ ಸರ್ಕಾರಕ್ಕೆ ವರದಿ ನೀಡಿತ್ತು. ನಿವೃತ್ತ ಡಿಜಿಪಿ ದರ್ಜೆಯ ಅಧಿಕಾರಿ ನೇತೃತ್ವದಲ್ಲಿ ಸಮಿತಿ ರಚನೆಗೆ ನಿರ್ಧಾರ ಮಾಡಲಾಗಿದೆ. ಇದಕ್ಕೆ ಗೃಹ ಸಚಿವರ ಅನುಮೋದನೆಯಷ್ಟೇ ಬಾಕಿ ಇದೆ. ನಿವೃತ್ತ ಡಿಜಿಪಿಗಳಾದ ಎಂ.ಕೆ.ಶ್ರೀವಾಸ್ತವ, ಎ.ಆರ್.ಇನ್ಪೇಂಟ್, ಎಸ್.ಸಿ. ಸಕ್ಸೇನಾ ಅವರಲ್ಲಿ ಒಬ್ಬರನ್ನು ಸಮಿತಿ ಮುಖ್ಯಸ್ಥರಾಗಿ ನೇಮಕ ಮಾಡುವ ಸಾಧ್ಯತೆ ಇದೆ.
ಗೃಹ ಇಲಾಖೆ ನಿರ್ಧಾರದಿಂದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಬೃಹತ್ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್, ಐಜಿಪಿ ಪ್ರಣಬ್ ಮೊಹಂತಿ, ಡಿಜಿಪಿ ಎ.ಎಂ.ಪ್ರಸಾದ್ ಈ ಪ್ರಕರಣದ ಆರೋಪಿಗಳಾಗಿದ್ದಾರೆ . ಕೆ.ಜೆ.ಚಾರ್ಜ್ ವಿರುದ್ದ ಸಿಎಂ ಹೆಚ್ಡಿಕೆ ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.