Asianet Suvarna News Asianet Suvarna News

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಮೂವರ ದುರ್ಮರಣ

ಫಾತೀಮಾ(27), ಅಬ್ದುಲ್ ಸಲಾಂ(54) ಸೇರಿ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ -75ರಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿದೆ.

Early Morning Accident Takes Place In Hassan

ಹಾಸನ(ಡಿ.05): ಇಂದು ಬೆಳಗ್ಗೆಯೇ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಹೌದು, ನಗರದ ಆಲೂರು ತಾಲೂಕಿನ ಹದ್ದುರ್ಗ ಬಳಿ ಕೆಎಸ್'ಆರ್'ಟಿಸಿ ವೋಲ್ವೋ ಬಸ್ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ್ದು ಮೂವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಫಾತೀಮಾ(27), ಅಬ್ದುಲ್ ಸಲಾಂ(54) ಸೇರಿ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ -75ರಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿದೆ.

ಘಟನೆ ಸ್ಥಳಕ್ಕೆ ಆಲೂರು, ಸಕಲೇಶಪುರ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow Us:
Download App:
  • android
  • ios