ಹಾಸನ ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ಚುನಾವಣಾ ಆಯೋಗದಿಂದ ತಡೆ
. ಈ ಹಿನ್ನಲೆಯಲ್ಲಿ ರೋಹಿಣಿ ಸಿಂಧೂರಿ ವರ್ಗಾವಣೆ ಜ.28ರವರೆಗೂ ತಡೆಯಾಗುವ ಸಾಧ್ಯತೆಯಿದೆ.
ಬೆಂಗಳೂರು(ಜ.23): ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಮಧ್ಯಪ್ರವೇಶ ಮಾಡಿದೆ.
ರಾಜ್ಯ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿರುವ ಚುನಾವಣಾ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆ ಮುಕ್ತಾಯದ ತನಕ ವರ್ಗಾವಣೆ ಬೇಡ ಎಂದು ತಿಳಿಸಿದೆ. ಈ ಹಿನ್ನಲೆಯಲ್ಲಿ ರೋಹಿಣಿ ಸಿಂಧೂರಿ ವರ್ಗಾವಣೆ ಜ.28ರವರೆಗೂ ತಡೆಯಾಗುವ ಸಾಧ್ಯತೆಯಿದೆ. ರೋಹಿಣಿ ಸೇರಿದಂತೆ ರಾಮನಗರ, ಹಾವೇರಿ, ಹಾಸನ ಜಿಲ್ಲಾಧಿಕಾರಿಗಳ ವರ್ಗಾವಣೆಗಳು ತಾತ್ಕಾಲಿಕವಾಗಿ ತಡೆಯಾಗಲಿದೆ.